hareesh gowda
ಮೈಸೂರು: ಚಾಮರಾಜ ಕ್ಷೇತ್ರದಲ್ಲಿ ಮಳೆ ಅನಾಹುತ ತಡೆಗಟ್ಟಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಗ್ಗು ಪ್ರದೇಶಗಳಲ್ಲಿ ನೀರು ಮನೆಗಳಿಗೆ ನುಗ್ಗುವುದನ್ನ ತಡೆಗಟ್ಟುವ ಕಾಮಗಾರಿಯನ್ನೂ ಮುಗಿಸಿದ್ದೇವೆ. ಯುಜಿಡಿ ನೀರು ಬ್ಲಾಕ್ ಆಗದಂತೆ ಜಟ್ಟಿಂಗ್ ಮಿಷನ್ಗಳನ್ನ ಕೂಡ ಸಜ್ಜಾಗಿಟ್ಟುಕೊಂಡಿದ್ದೇವೆ.
ಕಾರ್ಪೋರೇಷನ್ ಸಹಕಾರದೊಂದಿಗೆ ಎಲ್ಲೂ ಯಾವ ಸಮಸ್ಯೆ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಹಲವು ಸಲಹೆ, ಸೂಚನೆ ಕೊಟ್ಟಿದ್ದೇನೆ. ರಸ್ತೆ ಬದಿ ಇರುವ ಹಳೆ ಮರಗಳ ರೆಂಬೆ, ಕೊಂಬೆಗಳ ತೆರವು ಮಾಡುವುದಕ್ಕೂ ಸೂಚನೆ ನೀಡಿದ್ದೇವೆ. ಮೇಟಗಳ್ಳಿ, ಕುಂಬಾರ ಕೊಪ್ಪಲು, ಬಿಎಂಶ್ರೀ ನಗರದ ಕೆಲವು ಕಡೆ ತಗ್ಗು ಪ್ರದೇಶಗಳಲ್ಲಿ ಸ್ವಲ್ಪ ಸಮಸ್ಯೆ ಉಂಟಾಗುತ್ತದೆ. ಈಗಾಗಲೇ ಅಲ್ಲೆಲ್ಲಾ ಸಮಸ್ಯೆಗಳನ್ನು ಸರಿಪಡಿಸಲಾಗಿದೆ. ಈಗ ಬೀಳುವ ಮಳೆಗೆ ಮುಂಜಾಗ್ರತಾ ಕ್ರಮವನ್ನು ಸಮಾರೋಪಾದಿಯಲ್ಲಿ ತೆಗೆದುಕೊಳ್ಳಲು ಎಲ್ಲರೂ ಸಜ್ಜಾಗಿದ್ದಾರೆ ಎಂದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…