ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದ ವಿಶೇಷ ಪೂಜೆ , ದರ್ಶನಕ್ಕೆ ಭರದಿಂದ ಸಾಗಿದ ಸಿದ್ಧತೆ

ಮೈಸೂರು : ನಗರದ ಚಾಮುಂಡಿಬೆಟ್ಟದಲ್ಲಿ ಜುಲೈ ೧೨ ರಂದು ಮೊದಲ ಅಷಾಢ ಶುಕ್ರವಾರದ ಪೂಜೆ ನಡೆಯಲಿದ್ದು, ಭಕ್ತರಿಗೆ ತೊಂದರೆಯಾಗದ ರೀತಿಯಲ್ಲಿ ದೇವಿಯ ದರ್ಶನಕ್ಕೆ ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ.

ಆಷಾಢ ಶುಕ್ರವಾರದ ಆಚರಣೆಗಳಲ್ಲಿ ನಗರ ಮತ್ತು ಹೊರಗಿನಿಂದ ಲಕ್ಷಾಂತರ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಈಗಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಡಿಸಿ ಜಿ ಲಕ್ಷ್ಮೀಕಾಂತ್‌ ರೆಡ್ಡಿ, ಹೆಚ್ಚುವರಿ ಡಿಸಿ ಪಿ ಶಿವರಾಜ್‌, ನಗರ ಪೊಲೀಸ್‌ ಆಯುಕ್ತ ಸೀಮಾ ಲಾಟ್ಕರ್‌, ಡಿಸಿಪಿ ಎಂ ಮುತ್ತುರಾಜ್‌ ಸೇರಿದಂತೆ ಜಿಲ್ಲಾಡಳಿತ ಮತ್ತು ನಗರ ಪೊಲೀಸ್‌ ಹಿರಿಯ ಅಧಿಕಾರಿಗಳು ಮತ್ತು ಡಿಸಿಪಿ ಎಸ್‌ ಜಾಹ್ನವಿ ಬೆಟ್ಟಕ್ಕೆ ಭೇಟಿ ನೀಡಿ ಈಗಾಗಲೇ ಸಿದ್ಧತೆ ಬಗ್ಗೆ ಮೇಲ್ವಿಚಾರಣೆ ನಡೆಸಿದ್ದಾರೆ.

ಇದರ ಜೊತೆಗೆ ಈಗಾಗಲೇ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜನಸಂದಣಿ ನಿಯಂತ್ರಣ, ಸರತಿ ಸಾಲು ನಿರ್ವಹಣೆ, ಜೊತೆಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಸೌಕರ್ಯ ವ್ಯವಸ್ಥೆ ಸಂಬಂಧಿಸಿ ಸಲಹೆ ಮತ್ತು ಸೂಚನೆ ನೀಡಿದ್ದಾರೆ.

ಇನ್ನು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಬೆಟ್ಟಕ್ಕೆ ಹೋಗಲು ಉಚಿತ KSRTC ಬಸ್‌ ಗಳ ವ್ಯವಸ್ಥೆ ಮಾಡಲಾಗಿದೆ. ಲಲಿತ ಮಹಲ್‌ ಹೆಲಿಪ್ಯಾಡ್‌ ಬಳಿ ವಾಹನ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಫ್ಲೆಕ್ಸ್‌ ಬ್ಯಾನರ್‌ ಗಳು & ಬೋರ್ಡ್‌ ಗಳು ಮತ್ತು ಇತರ ಪ್ರಚಾರ ಸಾಮಾಗ್ರಿಗಳ ಪ್ರದರ್ಶನ ನಿಷೇಧಿಸಲಾಗಿದೆ. ಯಾವುದೇ ವಿಶೇಷ ಪಾಸ್‌ ಗಳು ಇಲ್ಲ ಎಂದು ಜಿಲ್ಲಾಡಳಿತ ತಿಳಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

52 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

53 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

56 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

57 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

1 hour ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

1 hour ago