ಮೈಸೂರು: ಯುಪಿಐ ಮೂಲಕ ಲಂಚ ಪಡೆದ ಆರೋಪದಡಿ ಮೈಸೂರಿನ ಮೂವರು ಅಧಿಕಾರಿಗಳ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.
ಈ ಕುರಿತು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ತಹಸೀಲ್ದಾರ್ ಶ್ರೀನಿವಾಸ್, ಅಂತರಸಂತೆ ನಾಡಕಚೇರಿಯ ರೆವಿನ್ಯು ಇನ್ಸ್ಪೆಕ್ಟರ್ ಗೋವಿಂದರಾಜು ಹಾಗೂ ಎನ್.ಬೆಳ್ತೂರು ಗ್ರಾಮ ಲೆಕ್ಕಾಡಳಿತಾಧಿಕಾರಿ ನಾಗರಾಜು ವಿರುದ್ಧ ಎಫ್ಐಆರ್ ದಾಖಲಾಗಿದೆ.
ಎಚ್.ಡಿ.ಕೋಟೆಯ ಬಿ.ವಿ.ಮಮತಾ ಕುಮಾರಿ ಎಂಬುವವರ ಬಳಿ ಅಧಿಕಾರಿಗಳು 50 ಸಾವಿರ ರೂಪಾಯಿಗಳ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಗುಂಡತ್ತೂರು ಗ್ರಾಮದ ಸರ್ವೆ ನಂ.10ರ 5 ಎಕರೆ 1 ಗುಂಟೆ ಭೂಮಿಯನ್ನು ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅಧಿಕಾರಿಗಳು ಆಸ್ತಿ ಪರಭಾರೆ ಮಾಡಿದ್ದರು. ಬಳಿಕ ಆಸ್ತಿ ಹಂಚಿಕೆ ಮಾಡಿ ಮಾರಾಟ ಮಾಡಲು ಹಾಗೂ ಹಿಂದಿನಂತೆ ದಾಖಲೆಗಳನ್ನು ಯಥಾಸ್ಥಿತಿ ಕಾಪಾಡಿಕೊಳ್ಳಲು ಲಂಚಕ್ಕೆ ಬೇಡಿಕೆಯನ್ನಿಟ್ಟಿದ್ದರು.
ಈ ವಿಚಾರವಾಗಿ ಮೊದಲ ಹಂತದಲ್ಲಿ 5 ಸಾವಿರ ಫೋನ್ ಪೇ ಮೂಲಕ ಲಂಚ ಪಡೆದು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…