ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ನಡೆಸಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ತಂಬಾಕು ಬೆಳೆಗಾರ ಗೊರಳ್ಳಿ ಅಶ್ವತ್ ಆರೋಪಿಸಿದರು.
ಈ ಕುರಿತು ಗುರುವಾರ ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ರೈತರಿಗೆ ತಂಬಾಕು ಮಂಡಳಿ ಮುಂಗಡವಾಗಿ 49 ಸಾವಿರ ರೂ. ಮೌಲ್ಯದ ರಸಗೊಬ್ಬರ ವಿತರಿಸುತ್ತಿದ್ದು, ಈ ಹಣವನ್ನು ರೈತರು ತಂಬಾಕು ಮಾರುಕಟ್ಟೆಗೆ ತಂಬಾಕು ಮಾರಾಟ ಮಾಡಿದ ನಂತರ ರೈತರಿಂದ ಪಡೆದುಕೊಂಡು ಬ್ಯಾಂಕಿಗೆ ಪಾವತಿಸಬೇಕಾಗಿತ್ತು. ಆದರೆ ಬ್ಯಾಂಕಿಗೆ ಪಾವತಿಸದೆ ತಮ್ಮ ಇಷ್ಟ ಬಂದ ಜನರ ಖಾತೆಗಳಿಗೆ ವರ್ಗಾಯಿಸಿಕೊಂಡು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರಿಗಳ ಪ್ರೋತ್ಸಾಹ ಇಲ್ಲದೆ ಹಗರಣ ಮಾಡಲು ಸಾಧ್ಯವಿಲ್ಲ, ತಂಬಾಕು ಮಂಡಳಿಯಲ್ಲಿ ಪ್ರತಿ ವರ್ಷ ಲೆಕ್ಕ ಪರಿಶೋಧನೆ ಮಾಡಿಸುವ ಪದ್ಧತಿ ಇದ್ದು, ಹಗರಣ ಆಗಿರುವಂತಹ ವರ್ಷಗಳಲ್ಲಿ ಯಾವ ಕಾರಣಕ್ಕೆ ಆಡಿಟ್ ಆಗಿಲ್ಲ? ಆಗಿದ್ದರೆ ಏಕೆ ಅಧಿಕಾರಿಗಳು ಈ ವಿಷಯವನ್ನು ಬಹಿರಂಗ ಪಡಿಸಿಲ್ಲ ಎಂದು ಪ್ರಶ್ನಿಸಿದರು.
ಕೋಟಿ ಕೋಟಿ ಹಣ ರೈತರಿಗೆ ವಂಚಿಸಿದ್ದರೂ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ, ಆದ್ದರಿಂದ ರೈತರ ಹಣ ವಂಚನೆಯ ಸಮಯದಲ್ಲಿದ್ದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…
ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…
ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…
ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…
ಚೀನಿ ಸೈನಿಕರು ಫಿರಂಗಿಗಳೊಂದಿಗೆ ಮುನ್ನುಗ್ಗುತ್ತಲೇ ಇದ್ದರು... ಉದ್ವಿಗ್ನ ಸನ್ನಿವೇಶದಲ್ಲಿ ರಕ್ಷಣಾ ಸಚಿವರಿಂದ ಸಿಗದ ಸ್ಪಷ್ಟ ಸಂದೇಶ ೨ ಗಂಟೆಗಳ ಕಾಲ…