ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ನಡೆಸಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ತಂಬಾಕು ಬೆಳೆಗಾರ ಗೊರಳ್ಳಿ ಅಶ್ವತ್ ಆರೋಪಿಸಿದರು.
ಈ ಕುರಿತು ಗುರುವಾರ ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ರೈತರಿಗೆ ತಂಬಾಕು ಮಂಡಳಿ ಮುಂಗಡವಾಗಿ 49 ಸಾವಿರ ರೂ. ಮೌಲ್ಯದ ರಸಗೊಬ್ಬರ ವಿತರಿಸುತ್ತಿದ್ದು, ಈ ಹಣವನ್ನು ರೈತರು ತಂಬಾಕು ಮಾರುಕಟ್ಟೆಗೆ ತಂಬಾಕು ಮಾರಾಟ ಮಾಡಿದ ನಂತರ ರೈತರಿಂದ ಪಡೆದುಕೊಂಡು ಬ್ಯಾಂಕಿಗೆ ಪಾವತಿಸಬೇಕಾಗಿತ್ತು. ಆದರೆ ಬ್ಯಾಂಕಿಗೆ ಪಾವತಿಸದೆ ತಮ್ಮ ಇಷ್ಟ ಬಂದ ಜನರ ಖಾತೆಗಳಿಗೆ ವರ್ಗಾಯಿಸಿಕೊಂಡು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರಿಗಳ ಪ್ರೋತ್ಸಾಹ ಇಲ್ಲದೆ ಹಗರಣ ಮಾಡಲು ಸಾಧ್ಯವಿಲ್ಲ, ತಂಬಾಕು ಮಂಡಳಿಯಲ್ಲಿ ಪ್ರತಿ ವರ್ಷ ಲೆಕ್ಕ ಪರಿಶೋಧನೆ ಮಾಡಿಸುವ ಪದ್ಧತಿ ಇದ್ದು, ಹಗರಣ ಆಗಿರುವಂತಹ ವರ್ಷಗಳಲ್ಲಿ ಯಾವ ಕಾರಣಕ್ಕೆ ಆಡಿಟ್ ಆಗಿಲ್ಲ? ಆಗಿದ್ದರೆ ಏಕೆ ಅಧಿಕಾರಿಗಳು ಈ ವಿಷಯವನ್ನು ಬಹಿರಂಗ ಪಡಿಸಿಲ್ಲ ಎಂದು ಪ್ರಶ್ನಿಸಿದರು.
ಕೋಟಿ ಕೋಟಿ ಹಣ ರೈತರಿಗೆ ವಂಚಿಸಿದ್ದರೂ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ, ಆದ್ದರಿಂದ ರೈತರ ಹಣ ವಂಚನೆಯ ಸಮಯದಲ್ಲಿದ್ದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಶ್ರೀರಂಗಪಟ್ಟಣ : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…
ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…
ಅಮೃತ್ಸರ : ಪಂಜಾಬ್ನ ಅಮೃತ್ಸರ್ ಮತ್ತು ಜಲಂಧರ್ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…
7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ : ವನ್ಯಜೀವಿಗಳ ಸಂಖ್ಯೆ ದಿನದಿಂದ…
ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…
ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…