ಪಿರಿಯಾಪಟ್ಟಣ: ತಂಬಾಕು ಮಂಡಳಿಯ ಹರಾಜು ಮಾರುಕಟ್ಟೆ ಸಂಖ್ಯೆ 5 ರಲ್ಲಿ ರೈತರಿಂದ ಸಂಗ್ರಹಣೆ ಮಾಡಿದ್ದ 6 ಕೋಟಿಗಳಿಗೂ ಹೆಚ್ಚು ಹಣವನ್ನು ಬ್ಯಾಂಕಿಗೆ ಪಾವತಿಸದೆ ವಿವಿಧ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಕೊಂಡು ಅವ್ಯವಹಾರ ನಡೆಸಿರುವ ಶಂಕೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ತಂಬಾಕು ಬೆಳೆಗಾರ ಗೊರಳ್ಳಿ ಅಶ್ವತ್ ಆರೋಪಿಸಿದರು.
ಈ ಕುರಿತು ಗುರುವಾರ ಪಟ್ಟಣದ ಕಾರ್ಯನಿರತ ಪತ್ರಕರ್ತ ಸಂಘದ ಕಚೇರಿಯಲ್ಲಿ ಮಾತನಾಡಿದ ಅವರು, ರೈತರಿಗೆ ತಂಬಾಕು ಮಂಡಳಿ ಮುಂಗಡವಾಗಿ 49 ಸಾವಿರ ರೂ. ಮೌಲ್ಯದ ರಸಗೊಬ್ಬರ ವಿತರಿಸುತ್ತಿದ್ದು, ಈ ಹಣವನ್ನು ರೈತರು ತಂಬಾಕು ಮಾರುಕಟ್ಟೆಗೆ ತಂಬಾಕು ಮಾರಾಟ ಮಾಡಿದ ನಂತರ ರೈತರಿಂದ ಪಡೆದುಕೊಂಡು ಬ್ಯಾಂಕಿಗೆ ಪಾವತಿಸಬೇಕಾಗಿತ್ತು. ಆದರೆ ಬ್ಯಾಂಕಿಗೆ ಪಾವತಿಸದೆ ತಮ್ಮ ಇಷ್ಟ ಬಂದ ಜನರ ಖಾತೆಗಳಿಗೆ ವರ್ಗಾಯಿಸಿಕೊಂಡು ಲೂಟಿ ಮಾಡಲಾಗಿದೆ ಎಂದು ಆರೋಪಿಸಿದರು.
ಅಧಿಕಾರಿಗಳ ಪ್ರೋತ್ಸಾಹ ಇಲ್ಲದೆ ಹಗರಣ ಮಾಡಲು ಸಾಧ್ಯವಿಲ್ಲ, ತಂಬಾಕು ಮಂಡಳಿಯಲ್ಲಿ ಪ್ರತಿ ವರ್ಷ ಲೆಕ್ಕ ಪರಿಶೋಧನೆ ಮಾಡಿಸುವ ಪದ್ಧತಿ ಇದ್ದು, ಹಗರಣ ಆಗಿರುವಂತಹ ವರ್ಷಗಳಲ್ಲಿ ಯಾವ ಕಾರಣಕ್ಕೆ ಆಡಿಟ್ ಆಗಿಲ್ಲ? ಆಗಿದ್ದರೆ ಏಕೆ ಅಧಿಕಾರಿಗಳು ಈ ವಿಷಯವನ್ನು ಬಹಿರಂಗ ಪಡಿಸಿಲ್ಲ ಎಂದು ಪ್ರಶ್ನಿಸಿದರು.
ಕೋಟಿ ಕೋಟಿ ಹಣ ರೈತರಿಗೆ ವಂಚಿಸಿದ್ದರೂ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಿಮಿನಲ್ ಪ್ರಕರಣವನ್ನು ಏಕೆ ದಾಖಲಿಸಿಲ್ಲ, ಆದ್ದರಿಂದ ರೈತರ ಹಣ ವಂಚನೆಯ ಸಮಯದಲ್ಲಿದ್ದ ಅಧಿಕಾರಿಗಳ ವಿರುದ್ಧ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…