ಮೈಸೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಮತಗಳ ಕಳ್ಳತನ ಮಾಡಲಾಗಿದೆ ಎಂಬ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಕ್ಕೆ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಹಾಗಾದರೆ ಎನ್.ಆರ್.ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ 70 ಸಾವಿರ ಲೀಡ್ ಸಿಕ್ಕಿದೆ. ಅಲ್ಲಿ ನೀವು ಮತಗಳ ಕಳ್ಳತನ ಮಾಡಿದ್ದೀರಾ? ನೀವು ಮತದಾರರಿಗೆ ತಲಾ 500 ರೂಪಾಯಿ ಹಂಚಿಕೆ ಮಾಡಿಲ್ವಾ ಎಂದು ಪ್ರಶ್ನೆ ಮಾಡಿದ ಅವರು, ಈ ಬಗ್ಗೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬಂದು ಪ್ರಮಾಣ ಮಾಡಿ. ಲೋಕಸಭಾ ಚುನಾವಣೆಯನ್ನು ಬಿಜೆಪಿ ಪ್ರಾಮಾಣಿಕವಾಗಿ ಎದುರಿಸಿದೆ.
ಯದುವೀರ್ ಅವರನ್ನು ಜನರು ಗೌರವ ಭಾವನೆಯಿಂದ ಕಂಡು ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ನಾಯಕರು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ನ ರಾಷ್ಟ್ರೀಯ ನಾಯಕರಿಗೆ ನಾಚಿಕೆ ಆಗಬೇಕು. ಸೋಲು ಸೋಲೇ, ನೀವು ಈಗ ಎಷ್ಟೇ ಬೊಂಬಡಾ ಬಜಾಯಿಸಿದರೂ ನಿಮ್ಮನ್ನು ಲೋಕಸಭೆಗೆ ಕಳುಹಿಸೋದಿಲ್ಲ. ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಹಾಗೂ ಜನರ ಗಮನ ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…