ಮೈಸೂರು ನಗರ

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು ಜಾತಿ ಅಸಮಾನತೆ ಜೊತೆಗೆ ಕನಸು ಕಾಣುವ ಅಸಮಾನತೆಯೂ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣ ಸ್ವಾಮಿ ವಿಷಾದಿಸಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸ್ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ಕವಿತಾ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಮೇಶ್ ಚಂದ್ರ ಅವರ ‘ಝಹಾದಿಯೊಳಗಣ ಹಾಡೇ ಝ’, ಗಣೇಶ್ ಅಮಿನಗಡ ಅವರ ‘ಕೈದಿಗಳ ಕಥನ’, ‘ರಂಗ ಪ್ರಸಂಗ’ ಹಾಗೂ ‘ರಂಗ ಕರ್ಪೂರ’ ಕವನ ಸಂಕಲನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜೈಲಿಗೆ ಹೋಗಿ ಬಂದ ನಂತರ ಅಪರಾಧದ ಕಳಂಕವನ್ನು ಜೀವನಪೂರ್ತಿ ಹೊತ್ತಿಕೊಂಡು ಬದುಕ ಬೇಕೇ ಎಂಬ ಪ್ರಶ್ನೆ ಮೂಡುತ್ತದೆ. ಆದರೆ, ಇದೇ ಅಪಮಾನ ರಾಜಕಾರಣಿಗಳಿಗೆ ಯಾಕೆ ಆಗುವುದಿಲ್ಲ? ಸಾವಿರಾರು ಕೋಟಿ ರೂ. ದುಡ್ಡು ಮಾಡಿರುವವರನ್ನು ಅಪರಾಧಿಗಳೆಂದು ತಿಳಿದಿದ್ದರೂ ಅವರಿಗೆ ನಮಸ್ಕಾರ ಮಾಡಿ ಹಾರ, ತುರಾಯಿ ಹಾಕಲಾಗುತ್ತದೆ. ನಮ್ಮ ನ್ಯಾಯದ ಕಲ್ಪನೆಯನ್ನೇ ಪ್ರಶ್ನೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.

ಜೈಲಿನಲ್ಲಿರುವ ಕೈದಿಗಳಿಗಿಂತ ಸಹಸ್ರಪಟ್ಟು ಅಪರಾಧ ಮಾಡಿರುವ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ. ಅವರು ಶ್ರೀಮಂತಿಕೆಯಲ್ಲಿ ಸುಖವಾಗಿಯೇ ಬದುಕುತ್ತಿದ್ದಾರೆ. ಆದರೆ, ನಾವು ಅವರನ್ನು ಅಪರಾಧಿಗಳೆಂದು ಕನಸು, ಮನಸ್ಸಿನಲ್ಲಿಯೂ ಭಾವಿಸುತ್ತಿಲ್ಲ ಎಂದು ವಿಷಾದಿಸಿದರು.

ಜೈಲಿನಲ್ಲಿ ಇರುವವರಲ್ಲಿ 100 ರಲ್ಲಿ 98 ಮಂದಿ ಹಳ್ಳಿಗಳಿಂದ ಬಂದ ಬಡವರು, ಅಲ್ಪ ಶಿಕ್ಷಿತರು. ಶಿಕ್ಷಣ ಪಡೆದವರಿದ್ದರೂ ನ್ಯಾಯವನ್ನು ಖರೀದಿಸಲು ಸಾಧ್ಯವಾಗದವರೇ ಹೆಚ್ಚು. ಅವರ ಮನಸ್ಥಿತಿಯನ್ನು ಅರಿತು ಅವರನ್ನು ಸುಧಾರಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಲೇಖಕರಾದ ರಮೇಶ್‌ಚಂದ್ರ, ಗಣೇಶ್ ಅಮಿನಗಡ, ಹಿರಿಯ ರಂಗಕರ್ಮಿ ಹುಲಿಗಪ್ಪ ಕಟ್ಟಿಮನಿ, ಬಿಡುಗಡೆಗೊಂಡ ಕೈದಿಗಳಾದ ಎಚ್.ವಿ.ರಮೇಶ್, ಮಹೇಶ ಬಾಗಳಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

3 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

3 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

3 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

3 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

3 hours ago