ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು ಜಾತಿ ಅಸಮಾನತೆ ಜೊತೆಗೆ ಕನಸು ಕಾಣುವ ಅಸಮಾನತೆಯೂ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣ ಸ್ವಾಮಿ ವಿಷಾದಿಸಿದರು.
ನಗರದ ಜೆಎಲ್ಬಿ ರಸ್ತೆಯಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ಕವಿತಾ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಮೇಶ್ ಚಂದ್ರ ಅವರ ‘ಝಹಾದಿಯೊಳಗಣ ಹಾಡೇ ಝ’, ಗಣೇಶ್ ಅಮಿನಗಡ ಅವರ ‘ಕೈದಿಗಳ ಕಥನ’, ‘ರಂಗ ಪ್ರಸಂಗ’ ಹಾಗೂ ‘ರಂಗ ಕರ್ಪೂರ’ ಕವನ ಸಂಕಲನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಜೈಲಿಗೆ ಹೋಗಿ ಬಂದ ನಂತರ ಅಪರಾಧದ ಕಳಂಕವನ್ನು ಜೀವನಪೂರ್ತಿ ಹೊತ್ತಿಕೊಂಡು ಬದುಕ ಬೇಕೇ ಎಂಬ ಪ್ರಶ್ನೆ ಮೂಡುತ್ತದೆ. ಆದರೆ, ಇದೇ ಅಪಮಾನ ರಾಜಕಾರಣಿಗಳಿಗೆ ಯಾಕೆ ಆಗುವುದಿಲ್ಲ? ಸಾವಿರಾರು ಕೋಟಿ ರೂ. ದುಡ್ಡು ಮಾಡಿರುವವರನ್ನು ಅಪರಾಧಿಗಳೆಂದು ತಿಳಿದಿದ್ದರೂ ಅವರಿಗೆ ನಮಸ್ಕಾರ ಮಾಡಿ ಹಾರ, ತುರಾಯಿ ಹಾಕಲಾಗುತ್ತದೆ. ನಮ್ಮ ನ್ಯಾಯದ ಕಲ್ಪನೆಯನ್ನೇ ಪ್ರಶ್ನೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.
ಜೈಲಿನಲ್ಲಿರುವ ಕೈದಿಗಳಿಗಿಂತ ಸಹಸ್ರಪಟ್ಟು ಅಪರಾಧ ಮಾಡಿರುವ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ. ಅವರು ಶ್ರೀಮಂತಿಕೆಯಲ್ಲಿ ಸುಖವಾಗಿಯೇ ಬದುಕುತ್ತಿದ್ದಾರೆ. ಆದರೆ, ನಾವು ಅವರನ್ನು ಅಪರಾಧಿಗಳೆಂದು ಕನಸು, ಮನಸ್ಸಿನಲ್ಲಿಯೂ ಭಾವಿಸುತ್ತಿಲ್ಲ ಎಂದು ವಿಷಾದಿಸಿದರು.
ಜೈಲಿನಲ್ಲಿ ಇರುವವರಲ್ಲಿ 100 ರಲ್ಲಿ 98 ಮಂದಿ ಹಳ್ಳಿಗಳಿಂದ ಬಂದ ಬಡವರು, ಅಲ್ಪ ಶಿಕ್ಷಿತರು. ಶಿಕ್ಷಣ ಪಡೆದವರಿದ್ದರೂ ನ್ಯಾಯವನ್ನು ಖರೀದಿಸಲು ಸಾಧ್ಯವಾಗದವರೇ ಹೆಚ್ಚು. ಅವರ ಮನಸ್ಥಿತಿಯನ್ನು ಅರಿತು ಅವರನ್ನು ಸುಧಾರಣೆ ಮಾಡಬೇಕಾಗಿದೆ ಎಂದು ತಿಳಿಸಿದರು.
ಲೇಖಕರಾದ ರಮೇಶ್ಚಂದ್ರ, ಗಣೇಶ್ ಅಮಿನಗಡ, ಹಿರಿಯ ರಂಗಕರ್ಮಿ ಹುಲಿಗಪ್ಪ ಕಟ್ಟಿಮನಿ, ಬಿಡುಗಡೆಗೊಂಡ ಕೈದಿಗಳಾದ ಎಚ್.ವಿ.ರಮೇಶ್, ಮಹೇಶ ಬಾಗಳಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಾಧನೆಯನ್ನು ಸೂಪರ್ ಸ್ಟಾರ್ ರಜನಿಕಾಂತ್ ಮನಬಿಚ್ಚಿ ಹೊಗಳಿದ್ದಾರೆ. ಚನ್ನೈನ ತಮ್ಮ ನಿವಾಸದಲ್ಲಿ…
ಇಂದೋರ್ : ಕೇರಳದ ತಿರುವನಂತಪುರಂನಿಂದ ದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸ್ಪ್ರೆಸ್ ರೈಲಿನ ಎಸಿ ಕೋಚ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ…
ಬದಲಾವಣೆ ಎನ್ನುವುದು ಜಗದ ನಿಯಮ ಎನ್ನುವ ನಾಣ್ಣುಡಿ ಈಗ ರಾಜಕೀಯ ರಂಗದಲ್ಲಿ ನಿರಂತರವಾಗಿ ನಡೆಯುತ್ತಲೇ ಇದೆ. ಪಶ್ಚಿಮ ಬಂಗಾಳ, ತಮಿಳುನಾಡು…
ಚಂದ್ರಶೇಖರ್ ಮೂರ್ತಿ.ಕೆ.ಎಸ್ ಟೀ ಅಂದರೆ ಬೇರೆ, ಚಹ ಅಂದರೆ ಬೇರೆ ಎಂದು ಹೇಳಿ ಚಕಿತಗೊಳಿಸಿದವರು ಮೈಸೂರಿನ ವಿಜಯನಗರ ಎರಡನೇ ಹಂತದಲ್ಲಿ…
ಸಿರಿ ಮೈಸೂರು ಇದು ಬೇಸಿಗೆ ಕಾಲ. ಕೆಲ ದಿನಗಳ ಹಿಂದಷ್ಟೇ ಫ್ರಾನ್ಸ್ನಲ್ಲಿ ಕ್ಯಾನ್ಸ್ ಫಿಲಂ ಫೆಸ್ಟಿವಲ್ ನಡೆಯಿತು. ಜಗತ್ತಿನಾದ್ಯಂತದಿಂದ ಸುರಸುಂದರ…
ವಿಕ್ರಮ್ ಹತ್ವಾರ್ ಮೊನ್ನೆ ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ ಚುನಾವಣೆಯಲ್ಲಿ ಸಾಧಿಸಿದ ಗೆಲುವಿನ ಕುರಿತು ಅಲ್ಲಿ ಯಾವೆಲ್ಲ ಸಂಗತಿಗಳು ಪ್ರಭಾವ…