ಮೈಸೂರು ನಗರ

ಜಾತಿ ಜತೆಗೆ ಕನಸು ಕಾಣುವ ಅಸಮಾನತೆಯೂ ಸೃಷ್ಟಿ : ನಾಗಭೂಷಣಸ್ವಾಮಿ ವಿಷಾದ

ಮೈಸೂರು : ಸುಧಾರಣೆ ನೆಪದಲ್ಲಿ ಕ್ರೌರ್ಯ ನಡೆಯುತ್ತಿದೆ. ಜೈಲಲ್ಲಿರುವ ಕೈದಿಗಳಿಗೆ ಕನಸು ಕಾಣುವ ಸ್ವಾತಂತ್ರ್ಯವೂ ಇಲ್ಲದಾಗಿದೆ. ಆರ್ಥಿಕ, ಅಧಿಕಾರ ಮತ್ತು ಜಾತಿ ಅಸಮಾನತೆ ಜೊತೆಗೆ ಕನಸು ಕಾಣುವ ಅಸಮಾನತೆಯೂ ಸಮಾಜದಲ್ಲಿ ಸೃಷ್ಟಿಯಾಗಿದೆ ಎಂದು ವಿಮರ್ಶಕ ಪ್ರೊ.ಓ.ಎಲ್. ನಾಗಭೂಷಣ ಸ್ವಾಮಿ ವಿಷಾದಿಸಿದರು.

ನಗರದ ಜೆಎಲ್‌ಬಿ ರಸ್ತೆಯಲ್ಲಿರುವ ದಿ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ‍್ಸ್ ಸಂಸ್ಥೆಯ ಸಭಾಂಗಣದಲ್ಲಿ ಭಾನುವಾರ ಕವಿತಾ ಪ್ರಕಾಶನದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಮೇಶ್ ಚಂದ್ರ ಅವರ ‘ಝಹಾದಿಯೊಳಗಣ ಹಾಡೇ ಝ’, ಗಣೇಶ್ ಅಮಿನಗಡ ಅವರ ‘ಕೈದಿಗಳ ಕಥನ’, ‘ರಂಗ ಪ್ರಸಂಗ’ ಹಾಗೂ ‘ರಂಗ ಕರ್ಪೂರ’ ಕವನ ಸಂಕಲನಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

ಜೈಲಿಗೆ ಹೋಗಿ ಬಂದ ನಂತರ ಅಪರಾಧದ ಕಳಂಕವನ್ನು ಜೀವನಪೂರ್ತಿ ಹೊತ್ತಿಕೊಂಡು ಬದುಕ ಬೇಕೇ ಎಂಬ ಪ್ರಶ್ನೆ ಮೂಡುತ್ತದೆ. ಆದರೆ, ಇದೇ ಅಪಮಾನ ರಾಜಕಾರಣಿಗಳಿಗೆ ಯಾಕೆ ಆಗುವುದಿಲ್ಲ? ಸಾವಿರಾರು ಕೋಟಿ ರೂ. ದುಡ್ಡು ಮಾಡಿರುವವರನ್ನು ಅಪರಾಧಿಗಳೆಂದು ತಿಳಿದಿದ್ದರೂ ಅವರಿಗೆ ನಮಸ್ಕಾರ ಮಾಡಿ ಹಾರ, ತುರಾಯಿ ಹಾಕಲಾಗುತ್ತದೆ. ನಮ್ಮ ನ್ಯಾಯದ ಕಲ್ಪನೆಯನ್ನೇ ಪ್ರಶ್ನೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಇದೆ ಎಂದು ಹೇಳಿದರು.

ಜೈಲಿನಲ್ಲಿರುವ ಕೈದಿಗಳಿಗಿಂತ ಸಹಸ್ರಪಟ್ಟು ಅಪರಾಧ ಮಾಡಿರುವ ರಾಜಕಾರಣಿಗಳು ನಮ್ಮನ್ನು ಆಳುತ್ತಿದ್ದಾರೆ. ಅವರು ಶ್ರೀಮಂತಿಕೆಯಲ್ಲಿ ಸುಖವಾಗಿಯೇ ಬದುಕುತ್ತಿದ್ದಾರೆ. ಆದರೆ, ನಾವು ಅವರನ್ನು ಅಪರಾಧಿಗಳೆಂದು ಕನಸು, ಮನಸ್ಸಿನಲ್ಲಿಯೂ ಭಾವಿಸುತ್ತಿಲ್ಲ ಎಂದು ವಿಷಾದಿಸಿದರು.

ಜೈಲಿನಲ್ಲಿ ಇರುವವರಲ್ಲಿ 100 ರಲ್ಲಿ 98 ಮಂದಿ ಹಳ್ಳಿಗಳಿಂದ ಬಂದ ಬಡವರು, ಅಲ್ಪ ಶಿಕ್ಷಿತರು. ಶಿಕ್ಷಣ ಪಡೆದವರಿದ್ದರೂ ನ್ಯಾಯವನ್ನು ಖರೀದಿಸಲು ಸಾಧ್ಯವಾಗದವರೇ ಹೆಚ್ಚು. ಅವರ ಮನಸ್ಥಿತಿಯನ್ನು ಅರಿತು ಅವರನ್ನು ಸುಧಾರಣೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಲೇಖಕರಾದ ರಮೇಶ್‌ಚಂದ್ರ, ಗಣೇಶ್ ಅಮಿನಗಡ, ಹಿರಿಯ ರಂಗಕರ್ಮಿ ಹುಲಿಗಪ್ಪ ಕಟ್ಟಿಮನಿ, ಬಿಡುಗಡೆಗೊಂಡ ಕೈದಿಗಳಾದ ಎಚ್.ವಿ.ರಮೇಶ್, ಮಹೇಶ ಬಾಗಳಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

11 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

12 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

13 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

13 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

14 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

16 hours ago