ಮೈಸೂರು ನಗರ

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎನ್.ನಾಗರಾಜು ಹೇಳಿದರು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ವಿಶ್ವ ವಿದ್ಯಾನಿಲಯ ವೃತ್ತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಾನಸ ಗಂಗೋತ್ರಿಯ ಕೃಷಿ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ‘ಉದ್ಯೋಗಾರ್ಹತೆ ಸಂವಹನ ಮತ್ತು ಮೃದು ಕೌಶಲ’ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಶೇ.65ರಷ್ಟು ಯುವಶಕ್ತಿ ಇದೆ. ಈ ಯುವಶಕ್ತಿಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ ಎಂದರು.

ಉದ್ಯೋಗ ಕ್ಷೇತ್ರದಲ್ಲಿ ನಮ್ಮ ಸಂಪರ್ಕ, ಸಂವಹನವನ್ನು ಹೇಗೆ ಸಮರ್ಥವಾಗಿ ಅಳವಡಿಸಿಕೊಳ್ಳುತ್ತೇವೆ? ಹೇಗೆ ಕಾಣಿಸಿಕೊಳ್ಳುತ್ತೇವೆ? ಏನು ಮಾತನಾಡುತ್ತೇವೆ ಮತ್ತು ಹೇಗೆ ಕಾಣಿಸಿಕೊಳ್ಳುತ್ತೇವೆ ಎಂಬ ನಾಲ್ಕು ಅಂಶಗಳು ಪ್ರಮುಖವಾಗುತ್ತವೆ. ಇದರ ಬಗ್ಗೆ ಗಮನವಿರಲಿ ಎಂದು ಅವರು ಸಲಹೆ ನೀಡಿದರು.

ಮೈಸೂರು ವಿಶ್ವವಿದ್ಯಾನಿಲಯದ ವೃತ್ತಿ ಕೇಂದ್ರದ ಸಂಯೋಜಕ ಪ್ರೊ.ಆರ್.ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನಾಮುಂದು, ತಾಮುಂದು ಎನ್ನುವ ಅನಾರೋಗ್ಯಕರ ಪೈಪೋಟಿಯಿದೆ. ಉನ್ನತ ಶಿಕ್ಷಣ ಪಡೆದ ಮಾತ್ರಕ್ಕೆ ಉದ್ಯೋಗ ಸಿಗುತ್ತದೆ ಎಂಬ ಭಾವನೆ ಸರಿಯಲ್ಲ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾಧಾರಿತ ಕೌಶಲವನ್ನು ಪಡೆಯುವುದು ಅನಿವಾರ್ಯ. ಕೌಶಲಾಧಾರಿತ ತರಬೇತಿ ಪಡೆಯುವುದು ಕೇವಲ ಉದ್ಯೋಗಕ್ಕೆ ಸೀಮಿತ ಅಲ್ಲ, ಅದು ನಿಮ್ಮ ವ್ಯಕ್ತಿತ್ವವನ್ನು ಬೆಳೆಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಸಣ್ಣಪ್ಪ, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

2 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

2 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

2 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

2 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

3 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

3 hours ago