ಮೈಸೂರು ನಗರ

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎನ್.ನಾಗರಾಜು ಹೇಳಿದರು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ವಿಶ್ವ ವಿದ್ಯಾನಿಲಯ ವೃತ್ತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಾನಸ ಗಂಗೋತ್ರಿಯ ಕೃಷಿ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ‘ಉದ್ಯೋಗಾರ್ಹತೆ ಸಂವಹನ ಮತ್ತು ಮೃದು ಕೌಶಲ’ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಶೇ.65ರಷ್ಟು ಯುವಶಕ್ತಿ ಇದೆ. ಈ ಯುವಶಕ್ತಿಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ ಎಂದರು.

ಉದ್ಯೋಗ ಕ್ಷೇತ್ರದಲ್ಲಿ ನಮ್ಮ ಸಂಪರ್ಕ, ಸಂವಹನವನ್ನು ಹೇಗೆ ಸಮರ್ಥವಾಗಿ ಅಳವಡಿಸಿಕೊಳ್ಳುತ್ತೇವೆ? ಹೇಗೆ ಕಾಣಿಸಿಕೊಳ್ಳುತ್ತೇವೆ? ಏನು ಮಾತನಾಡುತ್ತೇವೆ ಮತ್ತು ಹೇಗೆ ಕಾಣಿಸಿಕೊಳ್ಳುತ್ತೇವೆ ಎಂಬ ನಾಲ್ಕು ಅಂಶಗಳು ಪ್ರಮುಖವಾಗುತ್ತವೆ. ಇದರ ಬಗ್ಗೆ ಗಮನವಿರಲಿ ಎಂದು ಅವರು ಸಲಹೆ ನೀಡಿದರು.

ಮೈಸೂರು ವಿಶ್ವವಿದ್ಯಾನಿಲಯದ ವೃತ್ತಿ ಕೇಂದ್ರದ ಸಂಯೋಜಕ ಪ್ರೊ.ಆರ್.ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನಾಮುಂದು, ತಾಮುಂದು ಎನ್ನುವ ಅನಾರೋಗ್ಯಕರ ಪೈಪೋಟಿಯಿದೆ. ಉನ್ನತ ಶಿಕ್ಷಣ ಪಡೆದ ಮಾತ್ರಕ್ಕೆ ಉದ್ಯೋಗ ಸಿಗುತ್ತದೆ ಎಂಬ ಭಾವನೆ ಸರಿಯಲ್ಲ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾಧಾರಿತ ಕೌಶಲವನ್ನು ಪಡೆಯುವುದು ಅನಿವಾರ್ಯ. ಕೌಶಲಾಧಾರಿತ ತರಬೇತಿ ಪಡೆಯುವುದು ಕೇವಲ ಉದ್ಯೋಗಕ್ಕೆ ಸೀಮಿತ ಅಲ್ಲ, ಅದು ನಿಮ್ಮ ವ್ಯಕ್ತಿತ್ವವನ್ನು ಬೆಳೆಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಸಣ್ಣಪ್ಪ, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

8 mins ago

ಓದುಗರ ಪತ್ರ: ಡ್ರಗ್ಸ್ ಜಾಲ ಪತ್ತೆಗೆ ಡ್ರೋನ್ ಕಾರ್ಯಾಚರಣೆ ಶ್ಲಾಘನೀಯ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು…

11 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಸರ್ಕಾರ ಗುಣಮಟ್ಟದ ಚಲನಚಿತ್ರಗಳಿಗೆ ನೀಡುವ ಸಹಾಯಧನದ ಆಚೆ ಈಚೆ

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು…

13 mins ago

ಅಮೃತ್ ೨.೦ ಯೋಜನೆ ಕಾಮಗಾರಿ ಚುರುಕು

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ…

19 mins ago

ಸಫಾರಿಗೆ ರಹದಾರಿ; ವಾದ-ಪ್ರತಿರೋಧ

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ…

24 mins ago

ದಮ್ಮನಕಟ್ಟೆ ಸಫಾರಿ ಸವಿಯಲು ಪ್ರವಾಸಿಗರು ಕಾತರ…

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ…

34 mins ago