ಮೈಸೂರು ನಗರ

ಜ್ಞಾನದ ಜೊತೆ ಕೌಶಲವೂ ಮುಖ್ಯ : ಪರೀಕ್ಷಾಂಗ ಕುಲಸಚಿವ ನಾಗರಾಜು ಅಭಿಮತ

ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎನ್.ನಾಗರಾಜು ಹೇಳಿದರು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ವಿಶ್ವ ವಿದ್ಯಾನಿಲಯ ವೃತ್ತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಾನಸ ಗಂಗೋತ್ರಿಯ ಕೃಷಿ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ‘ಉದ್ಯೋಗಾರ್ಹತೆ ಸಂವಹನ ಮತ್ತು ಮೃದು ಕೌಶಲ’ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಶೇ.65ರಷ್ಟು ಯುವಶಕ್ತಿ ಇದೆ. ಈ ಯುವಶಕ್ತಿಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ ಎಂದರು.

ಉದ್ಯೋಗ ಕ್ಷೇತ್ರದಲ್ಲಿ ನಮ್ಮ ಸಂಪರ್ಕ, ಸಂವಹನವನ್ನು ಹೇಗೆ ಸಮರ್ಥವಾಗಿ ಅಳವಡಿಸಿಕೊಳ್ಳುತ್ತೇವೆ? ಹೇಗೆ ಕಾಣಿಸಿಕೊಳ್ಳುತ್ತೇವೆ? ಏನು ಮಾತನಾಡುತ್ತೇವೆ ಮತ್ತು ಹೇಗೆ ಕಾಣಿಸಿಕೊಳ್ಳುತ್ತೇವೆ ಎಂಬ ನಾಲ್ಕು ಅಂಶಗಳು ಪ್ರಮುಖವಾಗುತ್ತವೆ. ಇದರ ಬಗ್ಗೆ ಗಮನವಿರಲಿ ಎಂದು ಅವರು ಸಲಹೆ ನೀಡಿದರು.

ಮೈಸೂರು ವಿಶ್ವವಿದ್ಯಾನಿಲಯದ ವೃತ್ತಿ ಕೇಂದ್ರದ ಸಂಯೋಜಕ ಪ್ರೊ.ಆರ್.ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನಾಮುಂದು, ತಾಮುಂದು ಎನ್ನುವ ಅನಾರೋಗ್ಯಕರ ಪೈಪೋಟಿಯಿದೆ. ಉನ್ನತ ಶಿಕ್ಷಣ ಪಡೆದ ಮಾತ್ರಕ್ಕೆ ಉದ್ಯೋಗ ಸಿಗುತ್ತದೆ ಎಂಬ ಭಾವನೆ ಸರಿಯಲ್ಲ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾಧಾರಿತ ಕೌಶಲವನ್ನು ಪಡೆಯುವುದು ಅನಿವಾರ್ಯ. ಕೌಶಲಾಧಾರಿತ ತರಬೇತಿ ಪಡೆಯುವುದು ಕೇವಲ ಉದ್ಯೋಗಕ್ಕೆ ಸೀಮಿತ ಅಲ್ಲ, ಅದು ನಿಮ್ಮ ವ್ಯಕ್ತಿತ್ವವನ್ನು ಬೆಳೆಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.

ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಸಣ್ಣಪ್ಪ, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

18 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

18 hours ago