ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ.ಎನ್.ನಾಗರಾಜು ಹೇಳಿದರು.
ನಗರದ ಮೈಸೂರು ವಿಶ್ವವಿದ್ಯಾನಿಲಯದ ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗ ಮತ್ತು ವಿಶ್ವ ವಿದ್ಯಾನಿಲಯ ವೃತ್ತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಮಾನಸ ಗಂಗೋತ್ರಿಯ ಕೃಷಿ ವಿಜ್ಞಾನ ಅಧ್ಯಯನ ವಿಭಾಗದಲ್ಲಿ ಬುಧವಾರ ಆಯೋಜಿಸಿದ್ದ ‘ಉದ್ಯೋಗಾರ್ಹತೆ ಸಂವಹನ ಮತ್ತು ಮೃದು ಕೌಶಲ’ ಕುರಿತು ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಈಗಿನ ಯುವಕರಲ್ಲಿ ಸಂವಹನ ಕೌಶಲಗಳ ಕೊರತೆಯಿಂದಾಗಿ, ಪದವಿಗೆ ತಕ್ಕ ಉದ್ಯೋಗ ಪಡೆಯಲು ಸಾಧ್ಯವಾಗುತ್ತಿಲ್ಲ. ಭಾರತದಲ್ಲಿ ಶೇ.65ರಷ್ಟು ಯುವಶಕ್ತಿ ಇದೆ. ಈ ಯುವಶಕ್ತಿಗೆ ಸೂಕ್ತ ಮಾರ್ಗದರ್ಶನ ನೀಡಿದಾಗ ಭವಿಷ್ಯದಲ್ಲಿ ಉದ್ಯೋಗಾವಕಾಶಗಳನ್ನು ಸಮರ್ಥವಾಗಿ ಉಪಯೋಗಿಸಿಕೊಳ್ಳಲು ಅವಕಾಶವಾಗುತ್ತದೆ ಎಂದರು.
ಉದ್ಯೋಗ ಕ್ಷೇತ್ರದಲ್ಲಿ ನಮ್ಮ ಸಂಪರ್ಕ, ಸಂವಹನವನ್ನು ಹೇಗೆ ಸಮರ್ಥವಾಗಿ ಅಳವಡಿಸಿಕೊಳ್ಳುತ್ತೇವೆ? ಹೇಗೆ ಕಾಣಿಸಿಕೊಳ್ಳುತ್ತೇವೆ? ಏನು ಮಾತನಾಡುತ್ತೇವೆ ಮತ್ತು ಹೇಗೆ ಕಾಣಿಸಿಕೊಳ್ಳುತ್ತೇವೆ ಎಂಬ ನಾಲ್ಕು ಅಂಶಗಳು ಪ್ರಮುಖವಾಗುತ್ತವೆ. ಇದರ ಬಗ್ಗೆ ಗಮನವಿರಲಿ ಎಂದು ಅವರು ಸಲಹೆ ನೀಡಿದರು.
ಮೈಸೂರು ವಿಶ್ವವಿದ್ಯಾನಿಲಯದ ವೃತ್ತಿ ಕೇಂದ್ರದ ಸಂಯೋಜಕ ಪ್ರೊ.ಆರ್.ಮಹೇಶ್ ಮಾತನಾಡಿ, ಇಂದಿನ ದಿನಗಳಲ್ಲಿ ನಾಮುಂದು, ತಾಮುಂದು ಎನ್ನುವ ಅನಾರೋಗ್ಯಕರ ಪೈಪೋಟಿಯಿದೆ. ಉನ್ನತ ಶಿಕ್ಷಣ ಪಡೆದ ಮಾತ್ರಕ್ಕೆ ಉದ್ಯೋಗ ಸಿಗುತ್ತದೆ ಎಂಬ ಭಾವನೆ ಸರಿಯಲ್ಲ. ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾಧಾರಿತ ಕೌಶಲವನ್ನು ಪಡೆಯುವುದು ಅನಿವಾರ್ಯ. ಕೌಶಲಾಧಾರಿತ ತರಬೇತಿ ಪಡೆಯುವುದು ಕೇವಲ ಉದ್ಯೋಗಕ್ಕೆ ಸೀಮಿತ ಅಲ್ಲ, ಅದು ನಿಮ್ಮ ವ್ಯಕ್ತಿತ್ವವನ್ನು ಬೆಳೆಸುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಹೇಳಿದರು.
ರೇಷ್ಮೆ ಕೃಷಿ ವಿಜ್ಞಾನ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಬಿ.ಸಣ್ಣಪ್ಪ, ಪ್ರೊ.ಟಿ.ಎಸ್.ಜಗದೀಶ್ ಕುಮಾರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಇದ್ದರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…