ಮೈಸೂರು ನಗರ

‘ಅಂಬೇಡ್ಕರ್ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು’;ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಚೆನ್ನಬಸವಣ್ಣ

ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು  ಎಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾದ ಎಸ್.ಎಲ್.ಚನ್ನಬಸವಣ್ಣ ಹೇಳಿದರು.

ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧ ಧಮ್ಮ ಸಮಿತಿ ವತಿಯಿಂದ ಶುಕ್ರವಾರ ಸಂಜೆ ಆಯೋಜಿಸಿದ್ದ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಬಹುಜನರು, ತಳ ಸಮುದಾಯವನ್ನು ಶಿಕ್ಷಣದ ಮೂಲಕವೇ ಮೇಲೆತ್ತುವ ಕೆಲಸ ಮಾಡಿದರು. ಇಂತಹ ಕೆಲಸ ಯಾವ ದೇಶದಲ್ಲೂ ಆಗಿಲ್ಲ. ಬೇರೆ ದೇಶಗಳಲ್ಲಿ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹಿಂಸಾತ್ಮಕ ಕೃತ್ಯವನ್ನು ಅನುಸರಿಸಿದ್ದರಿಂದ ರಕ್ತ ಕ್ರಾಂತಿಗಳೇ ನಡೆದಿವೆ, ಹಿಂಸೆಯ ಮೂಲಕವೇ ಹಕ್ಕುಗಳನ್ನು ಪಡೆಯುವ ಕೆಲಸವಾಗಿದೆ. ಆದರೆ ಭಾರತದಲ್ಲಿ ಬಾಬಾ ಸಾಹೇಬರು ಇದಕ್ಕೆ ಅವಕಾಶ ನೀಡದೆ ಶಾಂತಿಯುತ ಹೋರಾಟದ ಮೂಲಕವೇ ಜನರಿಗೆ ಸಮಾನತೆಯನ್ನು ತಂದುಕೊಡುವ ಕೆಲಸ ಮಾಡಿದರು ಎಂದು ಸ್ಮರಿಸಿದರು.

ಯಾವುದೇ ಭಾಷೆ, ಧರ್ಮ, ಸಂಸ್ಕೃತಿಯನ್ನು ಪಾಲನೆ ಮಾಡಲು ಸಂವಿಧಾನವೇ ಮೂಲಕಾರಣ. ಆದ್ದರಿಂದ ಈ ದೇಶದ ನಿಜವಾದ ಧರ್ಮ ಗ್ರಂಥ ಸಂವಿಧಾನವಾಗಿದೆ. ಇಂದಿನ ಪೀಳಿಗೆಗೆ ಬಾಬಾ ಸಾಹೇಬರನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್. ಮಹದೇವಪ್ಪ ಮಾತನಾಡಿ, ಹಿಮಾಲಯದ ಮಾನಸ ಸರೋವರದಲ್ಲಿ ಹುಟ್ಟಿ, ಹಳ್ಳಕೊಳ್ಳ ಪ್ರದೇಶ, ಗಿರಿಕಂದರಗಳನ್ನು ದಾಟಿ ಬಯಲಾಗಿ ಹರಿಯುವ ಗಂಗಾನದಿಯು ಕೋಟ್ಯಂತರ ಜನರ ಜೀವನಾಡಿಯಾಗಿದೆ. ಅನೇಕ ಸಂಸ್ಕೃತಿ, ಧಾರ್ಮಿಕ ಕೇಂದ್ರಗಳ ಭಕ್ತಿ ಭಾವದ ಸೆಲೆಯಾಗಿ ಹರಿಯುವ ಗಂಗಾನದಿಯಂತೆ ಬಾಬಾಸಾಹೇಬರು ಈ ದೇಶದ ಕೋಟ್ಯಂತರ ಶೋಷಿತ ಜನರ ಧ್ವನಿಯಾಗಿ, ಅವರ ಬದುಕಿನ ದಾರಿದೀಪವಾಗಿದ್ದಾರೆ.

ಸಾವಿರಾರು ಕಿಲೋ ಮೀಟರ್ ದೂರ ಹರಿಯುವ ಗಂಗಾನದಿಯನ್ನು ಪೂಜ್ಯನೀಯ ಭಾವದಿಂದ ಗೌರವಿಸುತ್ತಾರೆ. ಬಾಬಾ ಸಾಹೇಬರು ಕೂಡ ಶೋಷಿತರ ನಡುವೆ ಇಂತಹದ್ದೇ ಸ್ಥಿತಿಯನ್ನು ತಲುಪಿದ್ದಾರೆ. ಹಾಗಾಗಿ ಬಾಬಾಸಾಹೇಬರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಸ್ವೀಕರಿಸಿದ್ದಾಗ ಮಾತ್ರ ನಮ್ಮ ನಡುವೆ ಉಳಿಯುತ್ತಾರೆ ಎಂದರು.

ಇದೇ ವೇಳೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಪ್ರೊ.ಸಿದ್ದಣ್ಣ ಲಂಗೋಟಿ, ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ, ಸಹ ಕಾರ್ಯದರ್ಶಿ ಎಚ್. ಶಿವರಾಜ್, ಎಂ.ಸಾವಕಯ್ಯ , ನಿವೃತ್ತ ಇಂಜಿನಿಯರ್ ಆರ್. ನಟರಾಜ್, ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಕ್ರಾಂತಿರಾಜ್ ಓಡೆಯರ್, ಪುಟ್ಟಸ್ವಾಮಿ, ದಯಾನಂದಮೂರ್ತಿ, ಕೆ. ಮಹಾದೇವಯ್ಯ, ಡಾ.ಸತ್ತಿಗೆಹುಂಡಿ ಮಂಜು, ಶಶಿಕಲಾ, ಮಾ.ನಾಗಯ್ಯ, ಪ್ರೇಮಲತಾ, ಬಿ. ಗಾಯತ್ರಿದೇವಿ, ರಾಜಮ್ಮ, ಪುಟ್ಟಮಾದಯ್ಯ, ಡಾ. ಎಸ್. ಜಯರಾಜು, ಎಚ್. ವಾಸು, ಪಿ.ಮರಿಸ್ವಾಮಿ, ಮಹದೇವಸ್ವಾಮಿ, ಕೆ. ಸಿದ್ದರಾಜು, ಎಸ್. ಆರ್. ಪ್ರಶಾಂತ್, ಸಣ್ಣಯ್ಯ ಲಕ್ಕೂರು, ರೂಪೇಶ್, ವಿಜಯ್ ಕುಮಾರ್, ಸಚಿನ್, ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

6 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

7 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago