ಮೈಸೂರು ನಗರ

‘ಅಂಬೇಡ್ಕರ್ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು’;ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ಚೆನ್ನಬಸವಣ್ಣ

ಮೈಸೂರು: ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವನ ಸಾಧನೆಯೇ ಒಂದು ದೊಡ್ಡ ಮೈಲಿಗಲ್ಲು  ಎಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾದ ಎಸ್.ಎಲ್.ಚನ್ನಬಸವಣ್ಣ ಹೇಳಿದರು.

ವಿಜಯನಗರ 1ನೇ ಹಂತದ ಡಿ.ಸಂಜೀವಯ್ಯ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿರುವ ಬುದ್ಧ ವಿಹಾರದಲ್ಲಿ ಕರ್ನಾಟಕ ಬುದ್ಧ ಧಮ್ಮ ಸಮಿತಿ ವತಿಯಿಂದ ಶುಕ್ರವಾರ ಸಂಜೆ ಆಯೋಜಿಸಿದ್ದ ಬೋಧಿಸತ್ವ ಬಾಬಾಸಾಹೇಬ್ ಅಂಬೇಡ್ಕರ್‌ರವರ ಪರಿನಿರ್ವಾಣ ದಿನಾಚರಣೆ ಮತ್ತು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದ ಬಹುಜನರು, ತಳ ಸಮುದಾಯವನ್ನು ಶಿಕ್ಷಣದ ಮೂಲಕವೇ ಮೇಲೆತ್ತುವ ಕೆಲಸ ಮಾಡಿದರು. ಇಂತಹ ಕೆಲಸ ಯಾವ ದೇಶದಲ್ಲೂ ಆಗಿಲ್ಲ. ಬೇರೆ ದೇಶಗಳಲ್ಲಿ ಜನರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹಿಂಸಾತ್ಮಕ ಕೃತ್ಯವನ್ನು ಅನುಸರಿಸಿದ್ದರಿಂದ ರಕ್ತ ಕ್ರಾಂತಿಗಳೇ ನಡೆದಿವೆ, ಹಿಂಸೆಯ ಮೂಲಕವೇ ಹಕ್ಕುಗಳನ್ನು ಪಡೆಯುವ ಕೆಲಸವಾಗಿದೆ. ಆದರೆ ಭಾರತದಲ್ಲಿ ಬಾಬಾ ಸಾಹೇಬರು ಇದಕ್ಕೆ ಅವಕಾಶ ನೀಡದೆ ಶಾಂತಿಯುತ ಹೋರಾಟದ ಮೂಲಕವೇ ಜನರಿಗೆ ಸಮಾನತೆಯನ್ನು ತಂದುಕೊಡುವ ಕೆಲಸ ಮಾಡಿದರು ಎಂದು ಸ್ಮರಿಸಿದರು.

ಯಾವುದೇ ಭಾಷೆ, ಧರ್ಮ, ಸಂಸ್ಕೃತಿಯನ್ನು ಪಾಲನೆ ಮಾಡಲು ಸಂವಿಧಾನವೇ ಮೂಲಕಾರಣ. ಆದ್ದರಿಂದ ಈ ದೇಶದ ನಿಜವಾದ ಧರ್ಮ ಗ್ರಂಥ ಸಂವಿಧಾನವಾಗಿದೆ. ಇಂದಿನ ಪೀಳಿಗೆಗೆ ಬಾಬಾ ಸಾಹೇಬರನ್ನು ಪರಿಚಯಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್. ಮಹದೇವಪ್ಪ ಮಾತನಾಡಿ, ಹಿಮಾಲಯದ ಮಾನಸ ಸರೋವರದಲ್ಲಿ ಹುಟ್ಟಿ, ಹಳ್ಳಕೊಳ್ಳ ಪ್ರದೇಶ, ಗಿರಿಕಂದರಗಳನ್ನು ದಾಟಿ ಬಯಲಾಗಿ ಹರಿಯುವ ಗಂಗಾನದಿಯು ಕೋಟ್ಯಂತರ ಜನರ ಜೀವನಾಡಿಯಾಗಿದೆ. ಅನೇಕ ಸಂಸ್ಕೃತಿ, ಧಾರ್ಮಿಕ ಕೇಂದ್ರಗಳ ಭಕ್ತಿ ಭಾವದ ಸೆಲೆಯಾಗಿ ಹರಿಯುವ ಗಂಗಾನದಿಯಂತೆ ಬಾಬಾಸಾಹೇಬರು ಈ ದೇಶದ ಕೋಟ್ಯಂತರ ಶೋಷಿತ ಜನರ ಧ್ವನಿಯಾಗಿ, ಅವರ ಬದುಕಿನ ದಾರಿದೀಪವಾಗಿದ್ದಾರೆ.

ಸಾವಿರಾರು ಕಿಲೋ ಮೀಟರ್ ದೂರ ಹರಿಯುವ ಗಂಗಾನದಿಯನ್ನು ಪೂಜ್ಯನೀಯ ಭಾವದಿಂದ ಗೌರವಿಸುತ್ತಾರೆ. ಬಾಬಾ ಸಾಹೇಬರು ಕೂಡ ಶೋಷಿತರ ನಡುವೆ ಇಂತಹದ್ದೇ ಸ್ಥಿತಿಯನ್ನು ತಲುಪಿದ್ದಾರೆ. ಹಾಗಾಗಿ ಬಾಬಾಸಾಹೇಬರನ್ನು ಸಾಂಸ್ಕೃತಿಕ ನಾಯಕರನ್ನಾಗಿ ಸ್ವೀಕರಿಸಿದ್ದಾಗ ಮಾತ್ರ ನಮ್ಮ ನಡುವೆ ಉಳಿಯುತ್ತಾರೆ ಎಂದರು.

ಇದೇ ವೇಳೆ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಪ್ರೊ.ಸಿದ್ದಣ್ಣ ಲಂಗೋಟಿ, ಸಮಿತಿಯ ಅಧ್ಯಕ್ಷರಾದ ಪ್ರೊ.ಡಿ.ನಂಜುಂಡಯ್ಯ, ಸಹ ಕಾರ್ಯದರ್ಶಿ ಎಚ್. ಶಿವರಾಜ್, ಎಂ.ಸಾವಕಯ್ಯ , ನಿವೃತ್ತ ಇಂಜಿನಿಯರ್ ಆರ್. ನಟರಾಜ್, ರಾಜು ಹಂಪಾಪುರ, ನಿಸರ್ಗ ಸಿದ್ದರಾಜು, ಕ್ರಾಂತಿರಾಜ್ ಓಡೆಯರ್, ಪುಟ್ಟಸ್ವಾಮಿ, ದಯಾನಂದಮೂರ್ತಿ, ಕೆ. ಮಹಾದೇವಯ್ಯ, ಡಾ.ಸತ್ತಿಗೆಹುಂಡಿ ಮಂಜು, ಶಶಿಕಲಾ, ಮಾ.ನಾಗಯ್ಯ, ಪ್ರೇಮಲತಾ, ಬಿ. ಗಾಯತ್ರಿದೇವಿ, ರಾಜಮ್ಮ, ಪುಟ್ಟಮಾದಯ್ಯ, ಡಾ. ಎಸ್. ಜಯರಾಜು, ಎಚ್. ವಾಸು, ಪಿ.ಮರಿಸ್ವಾಮಿ, ಮಹದೇವಸ್ವಾಮಿ, ಕೆ. ಸಿದ್ದರಾಜು, ಎಸ್. ಆರ್. ಪ್ರಶಾಂತ್, ಸಣ್ಣಯ್ಯ ಲಕ್ಕೂರು, ರೂಪೇಶ್, ವಿಜಯ್ ಕುಮಾರ್, ಸಚಿನ್, ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.

ಸುರೇಶ್‌ ಆರ್‌ ಕಂದೇಗಾಲ

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಗ್ರಾಮದವನಾದ ನಾನು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಬಿಎ, ರಾಜ್ಯಶಾಸ್ತ್ರದಲ್ಲಿ ಎಂಎ ಪದವಿಯನ್ನು ಮಾಡಿದ್ದೇನೆ. ಇದರ ಜೊತೆಗೆ ಭಾರತೀಯ ಭಾಷಾ ಸಂಸ್ಥಾನದಲ್ಲಿ ಒಂದು ವರ್ಷದ ಮಲಯಾಳಂ ಭಾಷಾ ಅಧ್ಯಯನ, ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯದಲ್ಲಿ ಕನ್ನಡ ಡಿಪ್ಲೊಮೊ ತರಬೇತಿ ಪಡೆದಿದ್ದೇನೆ. ವಿವಿಧ ದಿನಪತ್ರಿಕೆ, ಮಾಸ ಪತ್ರಿಕೆಗಳಲ್ಲಿ ಸಾಮಾಜಿಕ ಕಳಕಳಿವುಳ್ಳ ಹಲವಾರು ಲೇಖನಗಳನ್ನು ಬರೆದಿದ್ದೇನೆ. ಕಳೆದ 5 ವರ್ಷಗಳಿಂದ ಮೈಸೂರಿನ ಪ್ರತಿಷ್ಠಿತ ʼಆಂದೋಲನʼ ದಿನ ಪತ್ರಿಕೆಯಲ್ಲಿ ವರದಿಗಾರನಾಗಿ, ಉಪಸಂಪಾದಕನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಪುಸ್ತಕ ಓದುವುದರೊಂದಿಗೆ ಹಾಡುಗಾರಿಕೆ, ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಯಿದ್ದು, ಕ್ರಿಕೆಟ್ ನೆಚ್ಚಿನ ಕ್ರೀಡೆಯಾಗಿದೆ.

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

1 day ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

1 day ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

1 day ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

1 day ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

1 day ago