ಮೈಸೂರು : ಸಾಂಸ್ಕ ತಿಕ ನಗರಿಯ ಜನತೆಯ ಅನುಕೂಲಕ್ಕಾಗಿ ಮೈಸೂರಿನಿಂದ ಮುತ್ತಿನ ನಗರಿ ಹೈದರಾಬಾದ್ಗೆ ಮತ್ತೊಂದು ವಿಮಾನ ಸಂಚಾರ ಅತಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾಹಿತಿ ಹಂಚಿಕೊಂಡಿದ್ದಾರೆ.
ಮೈಸೂರಿನಿಂದ ಹೈದರಾಬಾದ್ಗೆ ಮೇ 1ರಿಂದ ಈ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯಾಹ್ನ 2.20ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಹೊರಡಲಿರುವ ವಿಮಾನ ಮಧ್ಯಾಹ್ನ ನಾಲ್ಕು ಗಂಟೆಗೆ ಹೈದರಾಬಾದ್ ತಲುಪಲಿದೆ. ಈಗಾಗಲೇ ಎರಡು ವಿಮಾನಗಳು ಚೆನ್ನೈ ಹಾಗೂ ಹೈದರಾಬಾದ್ಗೆ ತೆರಳುತ್ತಿದ್ದು, ಈ ವಿಮಾನ ಸೇವೆಯಿಂದ ನಾಗರಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಮಾಹಿತಿ ಹಂಚಿಕೊಂಡಿರುವ ಸಂಸದ ಯದುವೀರ್ ಒಡೆಯರ್, ಮುಂದಿನ ದಿನಗಳಲ್ಲಿ ಮೈಸೂರಿನಿಂದ ಹೆಚ್ಚುವರಿ ವಿಮಾನ ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಏರ್ ಟ್ರಾಫಿಕ್ ಹೆಚ್ಚಳದ ಗುರಿ
ಮೈಸೂರಿನಿಂದ ವಾಯು ಸಂಚಾರ ಹೆಚ್ಚಳಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಹಲವಾರು ಬಾರಿ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಿದ್ದೇನೆ. ವಿಮಾನ ನಿಲ್ದಾಣ ವಿಸ್ತರಣೆಗೆ ತೊಡಕಾಗಿರುವ ಭೂ ಸ್ವಾಧೀನ ಪ್ರಕ್ರಿಯೆ ಕೂಡ ಬಹುತೇಕ ಪೂರ್ಣಗೊಂಡಿದೆ. ಮುಂದಿನ ಕೆಲವೇ ದಿನಗಳಲ್ಲಿ ಇದು ಹಸ್ತಾಂತರಗೊಂಡ ನಂತರ ಕೇಂದ್ರದ ಮೇಲೆ ಇನ್ನಷ್ಟು ಒತ್ತಡ ಹೇರಿ ವಿಮಾನ ನಿಲ್ದಾಣ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದರು ವಿವರಿಸಿದ್ದಾರೆ.
ಒಮ್ಮೆ ವಿಮಾನ ನಿಲ್ದಾಣ ವಿಸ್ತರಣೆಗೊಂಡ ನಂತರ ದೇಶದ ನಾನಾ ಪ್ರಮುಖ ನಗರಗಳಿಗೆ ಮೈಸೂರಿನಿಂದ ನೇರ ವಿಮಾನ ಸಂಚಾರ ಸೇವೆ ಆರಂಭಗೊಳ್ಳಲಿದೆ. ಇದರೊಂದಿಗೆ ಮೈಸೂರಿನ ಅಭಿವೃದ್ಧಿಯೂ ಸಮಾನಾಂತರವಾಗಿ ಆಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…