ಮೈಸೂರು: ವಿಷ್ಣು ವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಅಭಿಮಾನಿಗಳು ರಕ್ತದಾನ ಮತ್ತು ಕೋಟಿಗೊಬ್ಬ ಕ್ಯಾಲೆಂಡರ್ಅನ್ನು ಅನಾವರಣ ಮಾಡಿದ್ದಾರೆ.
ಇಂದು (ಡಿಸೆಂಬರ್.30) ನಟ ವಿಷ್ಣುವರ್ಧನ್ ಅವರ 15ನೇ ಪುಣ್ಯಸ್ಮರಣೆ ಪ್ರಯುಕ್ತ ನಗರದ ಎಚ್.ಡಿ.ಕೋಟೆ ರಸ್ತೆಯ ಉದ್ಬೂರು ಗೇಟ್ ಸಮೀಪದಲ್ಲಿರುವ ವಿಷ್ಣುವರ್ಧನ್ ಸ್ಮಾರಕಕ್ಕೆ ನೂರಾರು ಜನ ಭೇಟಿ ನೀಡಿದ್ದಾರೆ. ಈ ವೇಳೆ ಅವರ ಕುಟುಂಬಸ್ಥರಾದ ಅವರ ಪತ್ನಿ ಭಾರತಿ ವಿಷ್ಣು ವರ್ಧನ್ ಹಾಗೂ ಅಳಿಯ ಅನಿರುದ್ಧ್ ಅವರು ಕೂಡ ಸ್ಮಾರಕಕ್ಕೆ ಭೇಟಿ ನೀಡಿ ಸ್ಮಾರಕಕ್ಕೆ ಮಾಲಾರ್ಪಣೆ ಮಾಡಿ, ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ವಿಷ್ಣು ವರ್ಧನ್ ಅಭಿಮಾನಿಗಳ ಸಂಘದ ವತಿಯಿಂದ ಅನ್ನ ಸಂತರ್ಪಣೆಯನ್ನು ಸಾರ್ವಜನಿಕರಿಗೆ ನೆರವೇರಿಸಿದ್ದಾರೆ.
ಈ ಸಂದರ್ಭದಲ್ಲಿ ಜೀವಧಾರ ರಕ್ತ ನಿಧಿ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ರಕ್ತದಾನ ಶಿಬಿರದಲ್ಲಿ ಸುಮಾರು 60ಕ್ಕೂ ಅಧಿಕ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದ್ದಾರೆ. ಬಳಿಕ ವಿಷ್ಣು ವರ್ಧನ್ ಅಭಿಮಾನಿ ಬಳಗವೂ ಭಾರತಿ ವಿಷ್ಣು ವರ್ಧನ್ ಹಾಗೂ ಅನಿರುದ್ಧ ಅವರಿಂದ ವಿಷ್ಣು ವರ್ಧನ್ ಅವರ 2025ರ ಕೋಟಿಗೊಬ್ಬ ಕ್ಯಾಲೆಂಡರ್ ಅನ್ನು ಅನಾವರಣಗೊಳಿಸಿದ್ದಾರೆ.
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…
ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…