asha karyakarte
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮೈಸೂರಿನ ಗಾಂಧಿ ಸರ್ಕಲ್ನಲ್ಲಿ ಜಮಾಯಿಸಿದ ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಆಶಾ ಕಾರ್ಯಕರ್ತೆಯರು, ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಭಾಗಶಃ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಈ ಏಪ್ರಿಲ್ ಇಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು.
2025 ಮಾರ್ಚ್ ರಾಜ್ಯ ಬಜೆಟ್ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ರೂ. 1000 ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು.
ತರ್ಕಬದ್ದಗೊಳಿಸುವ ಹೆಸರಿನಲ್ಲಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಿ. ಈ ಹೆಸರಲ್ಲಿ ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು.
ಅವೈಜ್ಞಾನಿಕ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು. 2025 ಜೂನ್-ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಎಂಬ ಹಕ್ಕೋತ್ತಾಯ ಮಂಡಿಸಿದ್ದಾರೆ.
ನಮ್ಮ ಬೇಡಿಕೆಗಳನ್ನು ಈಡೇರುವವರೆಗೂ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿರುವ ಆಶಾ ಕಾರ್ಯಕರ್ತೆಯರು, ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…