ಮೈಸೂರು ನಗರ

ಆ.12 ರಿಂದ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಮೈಸೂರು : ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಆ.12 ರಿಂದ 14 ರವರೆಗೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಮಿತಿ ವತಿಯಿಂದ ನಗರದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಈ ಹಿಂದೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದಾಗ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡುವ ಗೌರವಧನವನ್ನು ಕ್ರೋಢಿಕರಿಸಿ 10 ಸಾವಿರ ರೂ. ನಿಗದಿ ಮಾಡಿ, ಬಜೆಟ್‌ನಲ್ಲಿ ವಿಶಿಷ್ಟ ಯೋಜನೆಯನ್ನು ಏಪ್ರಿಲ್‌ನಲ್ಲಿ ನೀಡುವುದಾಗಿ ರಾಜ್ಯ ಸರ್ಕಾರದಿಂದ ಭರವಸೆ ನೀಡಲಾಗಿತ್ತು.

ಆದರೆ, ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ಕನಿಷ್ಠ 10 ಸಾವಿರ ರೂ. ನಿಗದಿಯಾಗಬೇಕು. ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಿದಂತೆ 1 ಸಾವಿರ ರೂ. ಪ್ರೋತ್ಸಾಹಧನವನ್ನು ಆಶಾ ಕಾರ್ಯಕರ್ತೆಯರಿಗೂ ನೀಡಬೇಕು. ಆಶಾ ಕಾರ್ಯಕರ್ತೆಯರ ಸಂಖ್ಯೆಯನ್ನು ಕಡಿತಗೊಳಿಸಬಾರದು, ಅವೈಜ್ಞಾನಿಕ ಕಾರ್ಯನಿರ್ವ ಹಣಾ ಮೌಲ್ಯಮಾಪನ ಕೈಬಿಡಬೇಕು ಎಂದು ಒತ್ತಾಯಿಸಿದರು. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷರಾದ ಭಾಗ್ಯ, ಉಪಾಧ್ಯಕ್ಷರಾದ ಮಣಿಲಾ, ನಗರ ಅಧ್ಯಕ್ಷರಾದ ಕೋಮಲ, ಜಿಲ್ಲಾ ಸಲಹೆಗಾರ್ತಿ ಪಿ.ಎಸ್.ಸಂಧ್ಯಾ, ಪವಿತ್ರಾ, ಸೀಮಾ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

20 mins ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

60 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

2 hours ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago