ashada shukravara Complete preparations at Chamundi Hill Lakshmikanta Reddy
ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.
ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಬೆಟ್ಟದಲ್ಲಿ ಮೂರು ತರದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಚಿತ ದರ್ಶನ, 300 ರೂ ದರ್ಶನ ಮತ್ತು 2000 ರೂ ದರ್ಶನಕ್ಕೆ ಪ್ರತ್ಯೇಕ ದರ್ಶನ ವ್ಯವಸ್ಥೆ ಮಾಡಲಾಗಿದೆ.
ಲಲಿತ ಮಹಲ್ ಮೈದಾನದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದ್ದು, ಉಚಿತ ದರ್ಶನದ ಭಕ್ತರಿಗೆ ಪ್ರತ್ಯೇಕ ಬಸ್, 300 ರೂ ಟಿಕೆಟ್ ಪಡೆದು ಹೋಗುವರಿಗೆ ಪ್ರತ್ಯೇಕ ಬಸ್ ಮತ್ತು ಎರಡು ಸಾವಿರ ರೂ ಟಿಕೆಟ್ ಪಡೆದು ಹೋಗುವವರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೂರು ವಿಭಾಗ ಮಾಡಿ ದರ್ಶನಕ್ಕೆ ಪ್ರತ್ಯೇಕ ಸರದಿ ಸಾಲನ್ನೂ ಕೂಡ ಮಾಡಲಾಗಿದೆ. ಉಚಿತ ದರ್ಶನಕ್ಕೆ ಬರುವ ಎಲ್ಲಾ ಭಕ್ತಾಧಿಗಳಿಗೂ ಉಚಿತ ಬಸ್ ವ್ಯವಸ್ಥೆ ಇರುತ್ತದೆ.
ಸಿಟಿ ಬಸ್ ನಿಲ್ದಾಣನಿಂದ ಬರುವ ಪುರುಷರು ಟಿಕೆಟ್ ಕೊಟ್ಟು ಬರಬೇಕಾಗುತ್ತದೆ. ಲಲಿತಾ ಮಹಲ್ ಬಳಿಯಿಂದ ಹೋಗುವ ಸಾಮಾನ್ಯ ಭಕ್ತಾಧಿಗಳಿಗೆ ಉಚಿತವಾಗಿರುತ್ತದೆ. ಶುಕ್ರವಾರದಿಂದ ಭಾನುವಾರದವರೆಗೂ 300, 2000ರೂ ಟಿಕೆಟ್ ಕೊಟ್ಟು ಹೋಗುವ ಭಕ್ತಾಧಿಗಳಿಗೆ ಮೂರು ದಿನಗಳೂ ಬಸ್ ಉಚಿತವಾಗಿರುತ್ತದೆ.
ಬೆಟ್ಟಕ್ಕೆ ಬರುವ ಭಕ್ತರಿಗೆ ಡ್ರೈಫ್ರೂಟ್ಸ್ ಮತ್ತು ನಂದಿನ ಬಾದಾಮಿ ಹಾಲನ್ನೂ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. 2 ಸಾವಿರ ವಿಶೇಷ ಟಿಕೆಟ್ ಹೊಂದಿರುವ ಭಕ್ತರನ್ನು ಕರೆತರುವ ಬಸ್ಸು ಮಹಿಷಾಸುರ ಪ್ರತಿಮೆವರೆಗೂ ಬರಲಿದೆ ಎಂದು ಮಾಹಿತಿ ನೀಡಿದರು.
ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕಾಶಪ್ಪನವರ್…
ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್ ಶಾಕ್ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.…
ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…
ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…