ಮೈಸೂರು ನಗರ

ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ

ಮೈಸೂರು: ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಚಾಮುಂಡಿಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿ ಬೆಟ್ಟದಲ್ಲಿ ಮೂರು ತರದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಉಚಿತ ದರ್ಶನ, 300 ರೂ ದರ್ಶನ ಮತ್ತು 2000 ರೂ ದರ್ಶನಕ್ಕೆ ಪ್ರತ್ಯೇಕ ದರ್ಶನ ವ್ಯವಸ್ಥೆ ಮಾಡಲಾಗಿದೆ.

ಲಲಿತ ಮಹಲ್ ಮೈದಾನದಿಂದ ಉಚಿತ ಬಸ್‌ ವ್ಯವಸ್ಥೆ ಮಾಡಲಾಗಿದ್ದು, ಉಚಿತ ದರ್ಶನದ ಭಕ್ತರಿಗೆ ಪ್ರತ್ಯೇಕ ಬಸ್, 300 ರೂ ಟಿಕೆಟ್ ಪಡೆದು ಹೋಗುವರಿಗೆ ಪ್ರತ್ಯೇಕ ಬಸ್ ಮತ್ತು ಎರಡು ಸಾವಿರ ರೂ ಟಿಕೆಟ್ ಪಡೆದು ಹೋಗುವವರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ. ಮೂರು ವಿಭಾಗ ಮಾಡಿ ದರ್ಶನಕ್ಕೆ ಪ್ರತ್ಯೇಕ ಸರದಿ ಸಾಲನ್ನೂ ಕೂಡ ಮಾಡಲಾಗಿದೆ. ಉಚಿತ ದರ್ಶನಕ್ಕೆ ಬರುವ ಎಲ್ಲಾ ಭಕ್ತಾಧಿಗಳಿಗೂ ಉಚಿತ ಬಸ್ ವ್ಯವಸ್ಥೆ ಇರುತ್ತದೆ.

ಸಿಟಿ ಬಸ್ ನಿಲ್ದಾಣನಿಂದ ಬರುವ ಪುರುಷರು ಟಿಕೆಟ್ ಕೊಟ್ಟು ಬರಬೇಕಾಗುತ್ತದೆ. ಲಲಿತಾ ಮಹಲ್ ಬಳಿಯಿಂದ ಹೋಗುವ ಸಾಮಾನ್ಯ ಭಕ್ತಾಧಿಗಳಿಗೆ ಉಚಿತವಾಗಿರುತ್ತದೆ. ಶುಕ್ರವಾರದಿಂದ ಭಾನುವಾರದವರೆಗೂ 300, 2000ರೂ ಟಿಕೆಟ್ ಕೊಟ್ಟು ಹೋಗುವ ಭಕ್ತಾಧಿಗಳಿಗೆ ಮೂರು ದಿನಗಳೂ ಬಸ್ ಉಚಿತವಾಗಿರುತ್ತದೆ.

ಬೆಟ್ಟಕ್ಕೆ ಬರುವ ಭಕ್ತರಿಗೆ ಡ್ರೈಫ್ರೂಟ್ಸ್ ಮತ್ತು ನಂದಿನ ಬಾದಾಮಿ ಹಾಲನ್ನೂ ಕೊಡುವ ವ್ಯವಸ್ಥೆ ಮಾಡಲಾಗುತ್ತದೆ. ಅಲ್ಲಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಭಕ್ತಾಧಿಗಳಿಗೆ ಯಾವುದೇ ತೊಂದರೆ ಆಗದಂತೆ ಸಕಲ ವ್ಯವಸ್ಥೆಯನ್ನು ಮಾಡಲಾಗಿದೆ. 2 ಸಾವಿರ ವಿಶೇಷ ಟಿಕೆಟ್ ಹೊಂದಿರುವ ಭಕ್ತರನ್ನು ಕರೆತರುವ ಬಸ್ಸು ಮಹಿಷಾಸುರ ಪ್ರತಿಮೆವರೆಗೂ ಬರಲಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

17 seconds ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

2 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

2 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

3 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

4 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

7 hours ago