ಮೈಸೂರು ನಗರ

ಆಷಾಢ ಶುಕ್ರವಾರ : ಚಾಮುಂಡಿ ಪಾದದ ಬಳಿಯೂ ಜನವೋ ಜನ

ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ.

ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು ಬರುತ್ತಿದ್ದು, ಚಾಮುಂಡಿ ಪಾದದ ಬಳಿಯೂ ಕೂಡ ಸಕಲ ಸಿದ್ದತೆಯನ್ನ ಮಾಡಲಾಗಿದೆ. ಭಕ್ತರಿಗೆ ನೂಕು ನುಗ್ಗಲೂ ಉಂಟಾಗದಂತೆ ಹಾಗೂ ಯಾವುದೇ ರೀತಿ ತೊಂದರೆ ಉಂಟಾಗದಂತೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಲ್ಲದೆ ವಾಹನ ನಿಲುಗಡೆಗೂ ಕೂಡ ಪಾರ್ಕಿಂಗ್‌ ವ್ಯವಸ್ಥೆ ಮಾಡಲಾಗಿದೆ.

ಇನ್ನು ಮಹಿಳೆಯರು ಕೂಡ 1001 ಮೆಟ್ಟಿಲುಗಳಿಗೂ ಅರಿಶಿಣ , ಕುಂಕುಮ ಮತ್ತು ಹೂಗಳನ್ನ ಇಟ್ಟು  ʼನಮ್ಮ ಇಷ್ಟಾರ್ಥ ನೆರವೇರಿಸುವ ತಾಯಿʼ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago