ಮೈಸೂರು : ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಲು ರಾಜ್ಯದ ಮೂಲೆ ಮೂಲೆಗಳಿಂದಲೂ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬಂದಿದೆ.
ಇನ್ನು ಚಾಮುಂಡಿ ಪಾದದ ಬಳಿಯೂ ಕೂಡ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ಚಾಮುಂಡೇಶ್ವರಿ ದರ್ಶನ ಪಡೆಯಲು ಸಾವಿರಾರು ಭಕ್ತರು ಬರುತ್ತಿದ್ದು, ಚಾಮುಂಡಿ ಪಾದದ ಬಳಿಯೂ ಕೂಡ ಸಕಲ ಸಿದ್ದತೆಯನ್ನ ಮಾಡಲಾಗಿದೆ. ಭಕ್ತರಿಗೆ ನೂಕು ನುಗ್ಗಲೂ ಉಂಟಾಗದಂತೆ ಹಾಗೂ ಯಾವುದೇ ರೀತಿ ತೊಂದರೆ ಉಂಟಾಗದಂತೆ ಬ್ಯಾರಿಕೇಡ್ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಪೊಲೀಸರನ್ನು ಕೂಡ ನಿಯೋಜನೆ ಮಾಡಲಾಗಿದೆ. ಅಲ್ಲದೆ ವಾಹನ ನಿಲುಗಡೆಗೂ ಕೂಡ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಇನ್ನು ಮಹಿಳೆಯರು ಕೂಡ 1001 ಮೆಟ್ಟಿಲುಗಳಿಗೂ ಅರಿಶಿಣ , ಕುಂಕುಮ ಮತ್ತು ಹೂಗಳನ್ನ ಇಟ್ಟು ʼನಮ್ಮ ಇಷ್ಟಾರ್ಥ ನೆರವೇರಿಸುವ ತಾಯಿʼ ಎಂದು ವಿಶೇಷ ಪ್ರಾರ್ಥನೆಯೊಂದಿಗೆ ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ.
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…
ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…
ಮಡಿಕೇರಿ : ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ…
ಚೆನ್ನೈ : ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ಹಾಗೂ ನಟ ವಿಜಯ್ ಅವರು ತಮಿಳುನಾಡು ವಿಧಾನಸಭಾ ಚುನಾವಣೆಗೆ…