ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು ಶುರುವಾಗಲಿವೆ.
ಚಾಮುಂಡಿ ಬೆಟ್ಟದಲ್ಲಿ ಮುಂದಿನ ಶುಕ್ರವಾರದಿಂದ ಆಷಾಢ ಪೂಜೆಗಳು ಶುರುವಾಗಲಿದ್ದು, ಇದಕ್ಕೆ ಮೈಸೂರು ಜಿಲ್ಲಾಡಳಿತ ಭರ್ಜರಿ ತಯಾರಿಗಳನ್ನು ನಡೆಸಿದೆ.
ಈ ಬಾರಿ ಚಾಮುಂಡೇಶ್ವರಿ ತಾಯಿಯ ದರ್ಶನಕ್ಕೆ ವಿಶೇಷ ಪಾಸ್ ವಿತರಿಸದಿರಲು ಜಿಲ್ಲಾಡಳಿತ ತೀರ್ಮಾನ ಮಾಡಿದೆ. ಇಷ್ಟು ಮಾತ್ರವಲ್ಲದೇ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶವನ್ನು ಕೂಡ ನಿರ್ಬಂಧಿಸಲಾಗಿದೆ.
ಈ ಎಲ್ಲಾ ಕ್ರಮಗಳನ್ನು ಪರಿಶೀಲಿಸಿದ ನಂತರ ಪ್ರತಿಕ್ರಿಯಿಸಿದ ಸಚಿವ ಎಚ್.ಸಿ.ಮಹದೇವಪ್ಪ ಅವರು, ಎಲ್ಲರೂ ಕೂಡ ಉಚಿತ ಬಸ್ನಲ್ಲೇ ಚಾಮುಂಡಿಬೆಟ್ಟಕ್ಕೆ ತೆರಳಬೇಕು ಎಂದು ಮನವಿ ಮಾಡಿದ್ದಾರೆ.
ಇನ್ನೂ ಆಷಾಢ ಮಾಸದಲ್ಲಿ ಶಕ್ತಿ ದೇವತೆಗಳನ್ನು ಪೂಜಿಸುವುದು ವಾಡಿಕೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನೆಲೆಸಿರುವ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಆಷಾಢ ಶುಕ್ರವಾರಗಳಂದು ವಿಶೇಷ ಪೂಜೆ ಹಾಗೂ ಅಲಂಕಾರ ಮಾಡಲಾಗುತ್ತದೆ.
ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿಬೆಟ್ಟಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವಿಯ ದರ್ಶನ ಪಡೆದು ಪುನೀತರಾಗುತ್ತಾರೆ. ಕೆಲವು ಭಕ್ತರು ಮೆಟ್ಟಿಲುಗಳನ್ನು ಹತ್ತಿಕೊಂಡು ಬೆಟ್ಟಕ್ಕೆ ಹೋಗುತ್ತಾರೆ. ಇನ್ನೂ ಕೆಲ ಭಕ್ತರು ಬಸ್ಸಿನ ಮುಖಾಂತರವೇ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವತೆಯ ದರ್ಶನ ಪಡೆಯಲಿದ್ದಾರೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…