ಮೈಸೂರು ನಗರ

ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ದಾಳಿ: ಡಾ.ಪಿ.ಸಿ.ಕುಮಾರಸ್ವಾಮಿ ಹೇಳಿದ್ದಿಷ್ಟು.!

ಮೈಸೂರು: ಭ್ರೂಣಲಿಂಗ ಪತ್ತೆ ಸೆಂಟರ್‌ ಮೇಲೆ ಯಶಸ್ವಿ ದಾಳಿ ನಡೆಸಲಾಗಿದ್ದು, ಐವರನ್ನು ಬಂಧಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ಸಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಇದು ರಾಜ್ಯ ಕಚೇರಿ ಹಾಗೂ ಮಂಡ್ಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿಯಾಗಿ ನಡೆಸಿದ ಹಠಾತ್‌ ಕಾರ್ಯಾಚರಣೆಯಾಗಿದೆ.

ಇದನ್ನು ಓದಿ : ಮೈಸೂರಿನಲ್ಲಿ ಭ್ರೂಣಲಿಂಗ ಪತ್ತೆ ಬೆಳಕಿಗೆ: ಸಚಿವ ದಿನೇಶ್‌ ಗುಂಡೂರಾವ್‌ ರಿಯಾಕ್ಷನ್‌

ಅಲ್ಲಿಗೆ ಸ್ಕ್ಯಾನಿಂಗ್‌ ಮಾಡಿಸಲು ಹೋಗುತ್ತಿದ್ದ ಗರ್ಭಿಣಿಯರ ಮೇಲೆ ನಿಗಾ ಇಡಲಾಗಿತ್ತು, ಅವರನ್ನು ಮಾನಿಟರ್‌ ಮಾಡುವ ಮೂಲಕ ಈ ಕಾರ್ಯಾಚರಣೆ ನಡೆಸಲಾಗಿದೆ.

ಕಾರ್ಯಾಚರಣೆಯಲ್ಲಿ ಒಟ್ಟು 5 ಜನರನ್ನು ಬಂಧಿಸಲಾಗಿದೆ. ದಾಳಿಯ ವೇಳೆ ಇಬ್ಬರು ಗರ್ಭಿಣಿಯರು ಅಲ್ಲಿದ್ದರು. ಅವರ ಪೋಷಕರ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಎಷ್ಟು ದಿನಗಳಿಂದ ಭ್ರೂಣ ಲಿಂಗ ಪತ್ತೆ ನಡೆಯುತ್ತಿತ್ತು. ಇಲ್ಲಿಯವರೆಗೆ ಎಷ್ಟು ಭ್ರೂಣ ಹತ್ಯೆ ನಡೆದಿವೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

8 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

9 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

9 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

9 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

9 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

10 hours ago