Mahadevappa doesn't even have the courtesy to talk about etiquette: Pratap Simha
ಮೈಸೂರು: ರಾಜ್ಯ ಸರ್ಕಾರದ ಜಾತಿ ಗಣತಿ ಸಮೀಕ್ಷಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಿಂದೂ ಸಮಾಜದ ಜಾತಿಗಳನ್ನು ಬಿಡಿ ಬಿಡಿಯಾಗಿ ಒಡೆದು ಅನ್ಯ ಧರ್ಮದ ಸಂಖ್ಯೆ ಹೆಚ್ಚು ತೋರಿಸುವ ಹುನ್ನಾರ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚು ತೋರಿಸಲು ಪ್ರಯತ್ನ ಮಾಡಲಾಗುತ್ತಿದೆ. ಹಿಂದೂಗಳ ಜಾತಿಗಳನ್ನು ಒಡೆದು ರಾಜಕೀಯ ದುರುದ್ದೇಶಕ್ಕಾಗಿ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಮಾಜದ ಸ್ವಾಮೀಜಿಗಳು ಈ ಬಗ್ಗೆ ಧ್ವನಿಯೆತ್ತಬೇಕು ಎಂದು ಹೇಳಿದರು.
ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಇಂತಹ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾನೂನು ಪದವೀಧರನಾಗಿ ಸಿಎಂ ಸಿದ್ದರಾಮಯ್ಯ ಇಂತಹ ಯತ್ನ ನಡೆಸಲು ಹೊರಟಿರುವುದು ತಪ್ಪು ಎಂಬ ಅರಿವು ಅವರಿಗೂ ಇದೆ. ಆದರೂ ರಾಜಕೀಯಕ್ಕಾಗಿ ಈ ದಾಳ ಉರುಳಿಸಿದ್ದಾರೆ. ಕುರ್ಚಿ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ತಂತ್ರ ಇದು ಎಂದು ಕಿಡಿಕಾರಿದರು.
ಶ್ರೀ ಶ್ರೀ ಶ್ರೀ ಎಂದು ಹೆಸರಿಟ್ಟುಕೊಂಡಿರುವವರು ಈ ಬಗ್ಗೆ ಧ್ವನಿಯೆತ್ತಬೇಕು. ಹಿಂದೂ ಸಮಾಜವನ್ನು ಒಡೆದು ರಾಜಕೀಯ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯಗೆ ಮುಂದಾಗುವ ಅನಾಹುತಗಳ ಬಗ್ಗೆ ತಿಳಿಹೇಳಬೇಕು ಎಂದು ಒತ್ತಾಯಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…