ಮೈಸೂರು ನಗರ

ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚು ತೋರಿಸಲು ಪ್ರಯತ್ನ: ಪ್ರತಾಪ್‌ ಸಿಂಹ ಆರೋಪ

ಮೈಸೂರು: ರಾಜ್ಯ ಸರ್ಕಾರದ ಜಾತಿ ಗಣತಿ ಸಮೀಕ್ಷಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಹಿಂದೂ ಸಮಾಜದ ಜಾತಿಗಳನ್ನು ಬಿಡಿ ಬಿಡಿಯಾಗಿ ಒಡೆದು ಅನ್ಯ ಧರ್ಮದ ಸಂಖ್ಯೆ ಹೆಚ್ಚು ತೋರಿಸುವ ಹುನ್ನಾರ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಸ್ಲಿಂ ಜನಸಂಖ್ಯೆಯನ್ನು ಹೆಚ್ಚು ತೋರಿಸಲು ಪ್ರಯತ್ನ ಮಾಡಲಾಗುತ್ತಿದೆ. ಹಿಂದೂಗಳ ಜಾತಿಗಳನ್ನು ಒಡೆದು ರಾಜಕೀಯ ದುರುದ್ದೇಶಕ್ಕಾಗಿ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದಾರೆ. ಸಮಾಜದ ಸ್ವಾಮೀಜಿಗಳು ಈ ಬಗ್ಗೆ ಧ್ವನಿಯೆತ್ತಬೇಕು ಎಂದು ಹೇಳಿದರು.

ಬ್ರಾಹ್ಮಣ ಕ್ರಿಶ್ಚಿಯನ್‌, ಒಕ್ಕಲಿಗ ಕ್ರಿಶ್ಚಿಯನ್‌ ಇಂತಹ ಸಮೀಕ್ಷೆಯನ್ನು ಒಪ್ಪಲು ಸಾಧ್ಯವಿಲ್ಲ. ಕಾನೂನು ಪದವೀಧರನಾಗಿ ಸಿಎಂ ಸಿದ್ದರಾಮಯ್ಯ ಇಂತಹ ಯತ್ನ ನಡೆಸಲು ಹೊರಟಿರುವುದು ತಪ್ಪು ಎಂಬ ಅರಿವು ಅವರಿಗೂ ಇದೆ. ಆದರೂ ರಾಜಕೀಯಕ್ಕಾಗಿ ಈ ದಾಳ ಉರುಳಿಸಿದ್ದಾರೆ. ಕುರ್ಚಿ ಭದ್ರಪಡಿಸಿಕೊಳ್ಳಲು ಸಿದ್ದರಾಮಯ್ಯ ಮಾಡುತ್ತಿರುವ ತಂತ್ರ ಇದು ಎಂದು ಕಿಡಿಕಾರಿದರು.

ಶ್ರೀ ಶ್ರೀ ಶ್ರೀ ಎಂದು ಹೆಸರಿಟ್ಟುಕೊಂಡಿರುವವರು ಈ ಬಗ್ಗೆ ಧ್ವನಿಯೆತ್ತಬೇಕು. ಹಿಂದೂ ಸಮಾಜವನ್ನು ಒಡೆದು ರಾಜಕೀಯ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯಗೆ ಮುಂದಾಗುವ ಅನಾಹುತಗಳ ಬಗ್ಗೆ ತಿಳಿಹೇಳಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

3 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

3 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

4 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

4 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

5 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

5 hours ago