ಮೈಸೂರು ನಗರ

ಆಗಸ್ಟ್.‌9ಕ್ಕೆ ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ

ಮೈಸೂರು: ಬಿಜೆಪಿ-ಜೆಡಿಎಸ್‌ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.‌9ಕ್ಕೆ ಕಾಂಗ್ರೆಸ್‌ ಮೈಸೂರಿನಲ್ಲಿ ಬೃಹತ್‌ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 ಜಿಲ್ಲೆಯ ಜನರು ಇಲ್ಲಿ ಭಾಗಿಯಾಗಲಿದ್ದಾರೆ. ಮೈಸೂರು, ಮಂಡ್ಯ, ಕೊಡಗು, ಹಾಸನ, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಯಿಂದ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಪ್ರತಿ ಹಳ್ಳಿಗೂ 2 ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಈ ಸಮಾವೇಶ ನಡೆಯಲಿದ್ದು, ಈಗಾಗಲೇ ಕಾಂಗ್ರೆಸ್‌ ನಾಯಕರು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ.

ಸಮಾವೇಶದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಯೋಜನೆಗಳು ಹಾಗೂ ಅಭಿವೃದ್ಧಿ ಕೆಲಸಗಳನ್ನು ಕುರಿತು ಭಾಷಣ ನಡೆಯಲಿದ್ದು, ಬಿಜೆಪಿ-ಜೆಡಿಎಸ್‌ ನಾಯಕರ ವಿರುದ್ಧ ವಾಗ್ದಾಳಿ ನಡೆಸುವ ಸಾಧ್ಯತೆಯಿದೆ.

ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಎಲ್ಲಾ ಸಚಿವರು ಹಾಗೂ ಶಾಸಕರು ಭಾಗಿಯಾಗುವ ನಿರೀಕ್ಷೆಯಿದ್ದು, ಮೈಸೂರಿನಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಲಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಜ.9ರಿಂದ ಮೈಸೂರಲ್ಲಿ ʻದೇಸಿ ಎಣ್ಣೆ ಮೇಳʼ

ಮೈಸೂರು : ಸಾಂಪ್ರದಾಯಿಕ ಎಣ್ಣೆಗಳ ಕೃಷಿ ಮತ್ತು ಬಳಕೆಯ ಬಗ್ಗೆ ರೈತರು ಮತ್ತು ಗ್ರಾಹಕರಿಗೆ ಅರಿವು ಮೂಡಿಸಲು, ಸಹಜ ಸಮೃದ್ಧ…

52 mins ago

ಟ್ರಂಪ್‌ ನಡೆಗೆ ಖಂಡನೆ ; ವೆನೆಜುವೆಲಾ ಅಧ್ಯಕ್ಷರ ಬಿಡುಗಡೆಗೆ ಆಗ್ರಹ

ಮೈಸೂರು : ವೆನೆಜುವೆಲಾ ಅಧ್ಯಕ್ಷರ ಬಂಧನ ಖಂಡಿಸಿ, ಕೂಡಲೇ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದ)…

1 hour ago

ಮೈಸೂರು | ವಸ್ತುಪ್ರದರ್ಶನದಲ್ಲಿ ಡ್ರಾಗನ್‌ ಬೋಟಿಂಗ್‌

ಮೈಸೂರು : ಮೈಸೂರು ನಗರಿಯೂ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುವ ಸ್ಥಳವಾಗಿದ್ದು, ಮೃಗಾಲಯ, ಚಾಮುಂಡಿ ಬೆಟ್ಟ, ಅರಮನೆ ಹೀಗೆ ಇಲ್ಲಿನ…

1 hour ago

ಹಿರಿಯ ಪತ್ರಕರ್ತ ರಾಜಕುಮಾರ್‌ ಬಾಹುಸಾರ್‌ ಇನ್ನಿಲ್ಲ

ಮೈಸೂರು : ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಪತ್ರಕರ್ತ ರಾಜಕುಮಾರ್ ಬಾಹುಸಾರ್(64) ಅವರು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಸಂಜೆ…

2 hours ago

ಬಹುಮಹಡಿ ಕಟ್ಟಡ, ಮನೆ ನಿರ್ಮಾಣಕ್ಕೆ ಕಡಿವಾಣ ಹಾಕಿ : ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಾಗರಿಕರ ಆಗ್ರಹ

ಮೈಸೂರು : ಚಾಮುಂಡಿ ಬೆಟ್ಟ ಉಳಿಸಿ ಎಂಬ ಆಶಯದಲ್ಲಿ ಹಲವು ಸಂಘಟನೆಗಳು ಹಾಗೂ ನಾಗರಿಕರು ಸೇರಿ ‘ಚಾಮುಂಡಿಬೆಟ್ಟ ಸಂರಕ್ಷಣೆಗಾಗಿ ನಡಿಗೆ’…

3 hours ago

ಬೆಂಗಳೂರು ಅಭಿವೃದ್ಧಿಗೆ 1.5 ಲಕ್ಷ ಕೋಟಿ ರೂ ಹೂಡಿಕೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದ ಜನಸಂಖ್ಯೆ ಮುಂದಿನ 20 ರಿಂದ 25 ವರ್ಷಗಳಲ್ಲಿನ ದ್ವಿಗುಣಗೊಳ್ಳಲಿದ್ದು, ನಗರದ ಮೂಲ ಸೌಕರ್ಯ ಕೊರತೆ…

3 hours ago