ಮೈಸೂರು ನಗರ

ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ

ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧.೧೫ರವರೆಗೆ ‘ಭಾರತದ ಸಂವಿಧಾನ’ ಕುರಿತು ಡಾ.ಶಿವಕುಮಾರ್ ಉಪನ್ಯಾಸ ನೀಡುವರು, ಎನ್.ಇಂದಿರಮ್ಮ ಪ್ರತಿಕ್ರಿಯೆ ನೀಡುವರು. ಬೆಳಿಗ್ಗೆ ೧೧.೧೫ಕ್ಕೆ ಪ್ರೊ.ರಹಮತ್ ತರೀಕೆರೆ ಅವರು ‘ನಾಗರಿಕತೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಹೋರಾಟ’ ವಿಷಯ ಮಂಡಿಸುವರು. ಹಾರೋಹಳ್ಳಿ ಪ್ರಕಾಶ ಪ್ರತಿಕ್ರಿಯೆ ನೀಡುವರು.

ಮಧ್ಯಾಹ್ನ ೧೨.೩೦ಕ್ಕೆ ‘ಉದ್ಯಮಶೀಲತೆ ಚಳವಳಿ: ಒಳನೋಟ’ದ ಕುರಿತು ಬಿ.ಶ್ರೀಪಾದ ಭಟ್ ಮಾತನಾಡಿದರೆ, ವರಹಳ್ಳಿ ಆನಂದ್ ಪ್ರತಿಕ್ರಿಯೆ ನೀಡುವರು. ಮಧ್ಯಾಹ್ನ ೨.೩೦ಕ್ಕೆ ಎಚ್.ಎಂ.ರುದ್ರಸ್ವಾಮಿ ಅವರು ‘ದಸಂಸ ನಡೆದು ಬಂದ ಹಾದಿ ಮತ್ತು ಮುಂದಿನ ನಡೆ’ ಕುರಿತು ಮಾತನಾಡಿದರೆ ಆಲಗೂಡು ಶಿವಕುಮಾರ್ ಪ್ರತಿಕ್ರಿಯೆ ನೀಡುವರು.

ಇದನ್ನೂ ಓದಿ:-ಕಾಂಗ್ರೆಸ್‌ ಆಯ್ತು ಇದೀಗ ಬಿಜೆಪಿ ಸರದಿ : ದಿಲ್ಲಿ ತಲುಪಿದ ಬಿಜೆಪಿ ಪ್ರತ್ಯೇಕ ಬಣ

ಮಧ್ಯಾಹ್ನ ೩.೪೫ಕ್ಕೆ ‘ಗ್ರಾಮಸಭೆಗಳ ಮಹತ್ವ’ ಕುರಿತು ರಾಜಾ ಹುಣಸೂರು ವಿಷಯ ಮಂಡಿಸಿದರೆ, ಯದುನಾಡ ನಾಗರಾಜ್ ಪ್ರತಿಕ್ರಿಯೆ ನೀಡುವರು. ಸಂಜೆ ೫ಕ್ಕೆ ಆರ್.ಸಂತೋಷ್ ನಾಯಕ್ ಅವರೊಂದಿಗೆ ‘ಪುಸ್ತಕ, ಓದು, ಚರ್ಚೆ, ಸಂವಾದ’ ನಡೆಯಲಿದೆ.

ಡಿ.೧೪ರಂದು ಬೆಳಿಗ್ಗೆ ೯ಕ್ಕೆ ‘ಜಾಗತೀಕರಣವೋ? ಮರುವಸಾಹಾತೀಕರಣವೋ’ ವಿಷಯ ಕುರಿತು ಎಚ್.ಎಸ್.ಶಿವಸುಂದರ್ ವಿಷಯ ಮಂಡಿಸುವರು, ಬಿ.ಡಿ.ಶಿವಬುದ್ಧಿ ಪ್ರತಿಕ್ರಿಯೆ ನೀಡುವರು. ಬೆಳಿಗ್ಗೆ ೧೦.೧೫ಕ್ಕೆ ಐಪಿಎಸ್ ಅಧಿಕಾರಿ ಡಾ.ಬಿ.ಟಿ.ಕವಿತಾ ಅವರು ‘ಯುವ ಜನತೆಗೆ ಕಾನೂನು’ ವಿಷಯ ಮಂಡಿಸುವರು.

ಬೆಳಿಗ್ಗೆ ೧೧.೩೦ಕ್ಕೆ ಕೆಎಎಸ್ ಅಽಕಾರಿ ಮಂಜುನಾಥ್ ಸೋಸಲೆ ‘ಸ್ಪರ್ಧಾತ್ಮಕ ಪರೀಕ್ಷೆ’ ಕುರಿತು, ಮಧ್ಯಾಹ್ನ ೧.೩೦ಕ್ಕೆ ಬಡಗಲಪುರ ನಾಗೇಂದ್ರ ‘ರೈತ ಸಂಘ ನಡೆದು ಬಂದ ಹಾದಿ ಮತ್ತು ಮುಂದಿನ ನಡೆ’ ಕುರಿತು ವಿಷಯ ಮಂಡಿಸಿದರೆ ಜೆ.ಎಂ.ವೀರಸಂಗಯ್ಯ ಪ್ರತಿಕ್ರಿಯೆ ನೀಡುವರು.

ಮಧ್ಯಾಹ್ನ ೨.೪೫ಕ್ಕೆ ಟಿ.ಜಿ.ಎಸ್. ಅವಿನಾಶ್ ‘ಜಾಗತಿಕ ತಾಪಮಾನ ಮತ್ತು ಕೃಷಿ’ ಮತ್ತು ಸಂಜೆ ೪ಕ್ಕೆ ‘ಪ್ರಸ್ತುತ ರಾಜಕೀಯ: ನಮ್ಮ ನಿಲುವು’ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ವಿಷಯ ಮಂಡಿಸುವರು. ಅಹಿಂದ ಜವರಪ್ಪ ಪ್ರತಿಕ್ರಿಯೆ ನೀಡುವರು. ಆಸಕ್ತರು ಹೆಚ್ಚಿನ ವಿವರಗಳಿಗೆ ಮೊ. ೮೧೯೭೮೫೬೧೩೨ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಸಿಎಂ ಬದಲಾವಣೆ ಚರ್ಚೆಗೆ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ

ಮೈಸೂರು: ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ…

10 mins ago

ಮಂಡ್ಯ| ಬೋನಿಗೆ ಬಿದ್ದ ಚಿರತೆ: ಗ್ರಾಮಸ್ಥರು ನಿರಾಳ

ಮಂಡ್ಯ: ಉಪಟಳ ನೀಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನ ದೊಡ್ಡಹೊಸಗಾವಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೆನ್ನಮ್ಮ…

39 mins ago

ರಾಜ್‌ಘಾಟ್‌ಗೆ ಭೇಟಿ ನೀಡಿ ರಾಷ್ಟ್ರಪತಿ ಮಹಾತ್ಮ ಗಾಂಧೀಜಿ ಸಮಾಧಿಗೆ ನಮನ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್‌

ರಾಜ್‌ಘಾಟ್‌ಗೆ ಭೇಟಿ ನೀಡಿದ ವ್ಲಾಡಿಮಿರ್‌ ಪುಟಿನ್‌, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ದೆಹಲಿಯಲ್ಲಿ ರಾಷ್ಟ್ರಪತಿ…

1 hour ago

ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆ: ಕೆಲವೆಡೆ ಮಂಜು ಕವಿದ ವಾತಾವರಣ

ಬೆಂಗಳೂರು: ರಾಜ್ಯದ ಹಲವೆಡೆ ಒಣಹವೆ ಇದ್ದರೆ ಮತ್ತೆ ಕೆಲವೆಡೆ ಮಂಜು, ಮೋಡ ಕವಿದ ವಾತಾವರಣ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ…

1 hour ago

ಹಾಸನ | ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆ

ಹಾಸನ: ನಾಪತ್ತೆಯಾಗಿದ್ದ ಗರ್ಭಿಣಿ ಮೃತದೇಹ ಕೆರೆಯಲ್ಲಿ ಪತ್ತೆಯಾಗಿದೆ. ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಹೊನ್ನವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು,…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಮರಗಳ ಮಾರಣಹೋಮ: ಎಫ್‌ಐಆರ್‌ ದಾಖಲು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ ರಸ್ತೆ ನಿರ್ಮಾಣ ಕಾರ್ಯಕ್ಕಾಗಿ ಮರಗಳ ಮಾರಣ ಹೋಮ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಮಲೆ…

2 hours ago