ಮೈಸೂರು ನಗರ

ಡಿ.13,14 ರಂದು ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ

ಮೈಸೂರು : ಉಳುಮೆ ಪ್ರತಿಷ್ಠಾನದ ವತಿಯಿಂದ ಡಿ.೧೩ ಮತ್ತು ೧೪ರಂದು ಬೋಗಾದಿ-ಗದ್ದಿಗೆ ರಸ್ತೆಯ ಬನವಾಸಿ ತೋಟದಲ್ಲಿ ಅರಿವಿನ ಚಾವಡಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಡಿ.೧೩ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧.೧೫ರವರೆಗೆ ‘ಭಾರತದ ಸಂವಿಧಾನ’ ಕುರಿತು ಡಾ.ಶಿವಕುಮಾರ್ ಉಪನ್ಯಾಸ ನೀಡುವರು, ಎನ್.ಇಂದಿರಮ್ಮ ಪ್ರತಿಕ್ರಿಯೆ ನೀಡುವರು. ಬೆಳಿಗ್ಗೆ ೧೧.೧೫ಕ್ಕೆ ಪ್ರೊ.ರಹಮತ್ ತರೀಕೆರೆ ಅವರು ‘ನಾಗರಿಕತೆ, ಸಂಸ್ಕೃತಿ ಮತ್ತು ಸಾಂಸ್ಕೃತಿಕ ಹೋರಾಟ’ ವಿಷಯ ಮಂಡಿಸುವರು. ಹಾರೋಹಳ್ಳಿ ಪ್ರಕಾಶ ಪ್ರತಿಕ್ರಿಯೆ ನೀಡುವರು.

ಮಧ್ಯಾಹ್ನ ೧೨.೩೦ಕ್ಕೆ ‘ಉದ್ಯಮಶೀಲತೆ ಚಳವಳಿ: ಒಳನೋಟ’ದ ಕುರಿತು ಬಿ.ಶ್ರೀಪಾದ ಭಟ್ ಮಾತನಾಡಿದರೆ, ವರಹಳ್ಳಿ ಆನಂದ್ ಪ್ರತಿಕ್ರಿಯೆ ನೀಡುವರು. ಮಧ್ಯಾಹ್ನ ೨.೩೦ಕ್ಕೆ ಎಚ್.ಎಂ.ರುದ್ರಸ್ವಾಮಿ ಅವರು ‘ದಸಂಸ ನಡೆದು ಬಂದ ಹಾದಿ ಮತ್ತು ಮುಂದಿನ ನಡೆ’ ಕುರಿತು ಮಾತನಾಡಿದರೆ ಆಲಗೂಡು ಶಿವಕುಮಾರ್ ಪ್ರತಿಕ್ರಿಯೆ ನೀಡುವರು.

ಇದನ್ನೂ ಓದಿ:-ಕಾಂಗ್ರೆಸ್‌ ಆಯ್ತು ಇದೀಗ ಬಿಜೆಪಿ ಸರದಿ : ದಿಲ್ಲಿ ತಲುಪಿದ ಬಿಜೆಪಿ ಪ್ರತ್ಯೇಕ ಬಣ

ಮಧ್ಯಾಹ್ನ ೩.೪೫ಕ್ಕೆ ‘ಗ್ರಾಮಸಭೆಗಳ ಮಹತ್ವ’ ಕುರಿತು ರಾಜಾ ಹುಣಸೂರು ವಿಷಯ ಮಂಡಿಸಿದರೆ, ಯದುನಾಡ ನಾಗರಾಜ್ ಪ್ರತಿಕ್ರಿಯೆ ನೀಡುವರು. ಸಂಜೆ ೫ಕ್ಕೆ ಆರ್.ಸಂತೋಷ್ ನಾಯಕ್ ಅವರೊಂದಿಗೆ ‘ಪುಸ್ತಕ, ಓದು, ಚರ್ಚೆ, ಸಂವಾದ’ ನಡೆಯಲಿದೆ.

ಡಿ.೧೪ರಂದು ಬೆಳಿಗ್ಗೆ ೯ಕ್ಕೆ ‘ಜಾಗತೀಕರಣವೋ? ಮರುವಸಾಹಾತೀಕರಣವೋ’ ವಿಷಯ ಕುರಿತು ಎಚ್.ಎಸ್.ಶಿವಸುಂದರ್ ವಿಷಯ ಮಂಡಿಸುವರು, ಬಿ.ಡಿ.ಶಿವಬುದ್ಧಿ ಪ್ರತಿಕ್ರಿಯೆ ನೀಡುವರು. ಬೆಳಿಗ್ಗೆ ೧೦.೧೫ಕ್ಕೆ ಐಪಿಎಸ್ ಅಧಿಕಾರಿ ಡಾ.ಬಿ.ಟಿ.ಕವಿತಾ ಅವರು ‘ಯುವ ಜನತೆಗೆ ಕಾನೂನು’ ವಿಷಯ ಮಂಡಿಸುವರು.

ಬೆಳಿಗ್ಗೆ ೧೧.೩೦ಕ್ಕೆ ಕೆಎಎಸ್ ಅಽಕಾರಿ ಮಂಜುನಾಥ್ ಸೋಸಲೆ ‘ಸ್ಪರ್ಧಾತ್ಮಕ ಪರೀಕ್ಷೆ’ ಕುರಿತು, ಮಧ್ಯಾಹ್ನ ೧.೩೦ಕ್ಕೆ ಬಡಗಲಪುರ ನಾಗೇಂದ್ರ ‘ರೈತ ಸಂಘ ನಡೆದು ಬಂದ ಹಾದಿ ಮತ್ತು ಮುಂದಿನ ನಡೆ’ ಕುರಿತು ವಿಷಯ ಮಂಡಿಸಿದರೆ ಜೆ.ಎಂ.ವೀರಸಂಗಯ್ಯ ಪ್ರತಿಕ್ರಿಯೆ ನೀಡುವರು.

ಮಧ್ಯಾಹ್ನ ೨.೪೫ಕ್ಕೆ ಟಿ.ಜಿ.ಎಸ್. ಅವಿನಾಶ್ ‘ಜಾಗತಿಕ ತಾಪಮಾನ ಮತ್ತು ಕೃಷಿ’ ಮತ್ತು ಸಂಜೆ ೪ಕ್ಕೆ ‘ಪ್ರಸ್ತುತ ರಾಜಕೀಯ: ನಮ್ಮ ನಿಲುವು’ ಕುರಿತು ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ವಿಷಯ ಮಂಡಿಸುವರು. ಅಹಿಂದ ಜವರಪ್ಪ ಪ್ರತಿಕ್ರಿಯೆ ನೀಡುವರು. ಆಸಕ್ತರು ಹೆಚ್ಚಿನ ವಿವರಗಳಿಗೆ ಮೊ. ೮೧೯೭೮೫೬೧೩೨ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

10 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

10 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

11 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

12 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

12 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

12 hours ago