ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ.
ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ.
ಅರಮನೆಯ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಕುದುರೆ ಮತ್ತು ಪಟ್ಟದ ಹಸು ಆಗಮಿಸಿದ ಬಳಿಕ ಆಯುಧ ಪೂಜೆ ನೆರವೇರಿದೆ.
ಇಂದು ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆಯುಧ ಪೂಜೆ ನೆರವೇರಿಸಿದ್ದಾರೆ.
ಯದುವೀರ್ ಒಡೆಯರ್ ಅವರು, ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಿದ್ದಾರೆ.
ಈ ಮಧ್ಯೆ ನಾಳೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರಾಯಿಕವಾಗಿ ನಡೆಯುತ್ತಿರುವ ನಾಡಹಬ್ಬ ಮೈಸೂರು ದಸರಾಗೆ ತೆರೆ ಬೀಳಲಿದೆ.
ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…
ರಿಯಾಧ್: ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್…
ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…
ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…