ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಸೇರಿದಂತೆ ರಾಜ್ಯಾದ್ಯಂತ ಆಯುಧ ಪೂಜೆಯ ಸಂಭ್ರಮ ಮನೆಮಾಡಿದೆ.
ಬೆಳಿಗ್ಗೆಯಿಂದಲೇ ಮೈಸೂರು ಅರಮನೆಯಲ್ಲಿ ವಿಶೇಷ ಪೂಜೆಗಳು ಆರಂಭವಾಗಿವೆ. ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ಇದೊಂದು ಹಿಂದೂ ಹಬ್ಬ ಕೂಡ ಆಗಿದೆ.
ಅರಮನೆಯ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಕುದುರೆ ಮತ್ತು ಪಟ್ಟದ ಹಸು ಆಗಮಿಸಿದ ಬಳಿಕ ಆಯುಧ ಪೂಜೆ ನೆರವೇರಿದೆ.
ಇಂದು ಮೈಸೂರು ಅರಮನೆಯಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಆಯುಧ ಪೂಜೆ ನೆರವೇರಿಸಿದ್ದಾರೆ.
ಯದುವೀರ್ ಒಡೆಯರ್ ಅವರು, ಅರಮನೆಯಲ್ಲಿನ ಆಯುಧಗಳಿಗೆ ಪೂಜೆ ನೆರವೇರಿಸಿ, ಖಾಸಗಿ ದರ್ಬಾರ್ ನಡೆಸಿದ್ದಾರೆ.
ಈ ಮಧ್ಯೆ ನಾಳೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ನಡೆಯಲಿದ್ದು, ಇದರೊಂದಿಗೆ ಕಳೆದ ಹತ್ತು ದಿನಗಳಿಂದ ಸಾಂಪ್ರಾಯಿಕವಾಗಿ ನಡೆಯುತ್ತಿರುವ ನಾಡಹಬ್ಬ ಮೈಸೂರು ದಸರಾಗೆ ತೆರೆ ಬೀಳಲಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…