ಮೈಸೂರು ನಗರ

ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನಕ್ಕೆ ಚಾಲನೆ

ಮೈಸೂರು: ಹಸಿರುಲೋಕ ಸಂಘಟನೆ ವತಿಯಿಂದ ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ 113ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕೃಷ್ಣಮೂರ್ತಿಪುರಂ ಬಡಾವಣೆಯ ಗುಬ್ಬಚ್ಚಿ ಶಾಲೆಯಲ್ಲಿ ಮನೆಗೊಂದು ಗಿಡ ಆಯುರ್ವೇದ ಸಸಿ ವಿತರಣೆ ಅಭಿಯಾನ ನಡೆಸಲಾಯಿತು.

ಲಕ್ಷ್ಮಿಪುರಂ ಪೋಲಿಸ್ ಠಾಣೆ ಆರಕ್ಷಕ ವೃತ್ತ ನಿರೀಕ್ಷಕರಾದ ರವಿಶಂಕರ್ ರವರು ಶಾಲಾ ಮಕ್ಕಳಿಗೆ ಮತ್ತು ಸಾರ್ವಜನಿಕರಿಗೆ ಆಯುರ್ವೇದ ಗಿಡಗಳನ್ನ ವಿತರಿಸಿ ಚಾಲನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ದೇಶ ಸಮೃದ್ಧಿಯಾಗಬೇಕಾದರೆ ಸಣ್ಣ ವಯಸ್ಸಿನಲ್ಲೇ ಮಕ್ಕಳು ಉತ್ತಮ ಶಿಕ್ಷಣ ಪಡೆದು ಮೌಲ್ಯಯುತವಾದ ಜೀವನ ನಡೆಸಬೇಕು ಮತ್ತು ಮನೆಗೊಂದು ಗಿಡ ನೆಟ್ಟು ಪೋಷಿಸುವಂತೆ ನಾಗರೀಕರು ಮುಂದಾಗಬೇಕು ಎಂದು ಅಭಿಪ್ರಾಯಪಟ್ಟರು.

ಇತ್ತೀಚಿನ ದಿನಗಳಲ್ಲಿ ತಾಪಮಾನ ಹೆಚ್ಚಾಗುತ್ತಿದೆ, ದುಷ್ಟಟ ಮತ್ತು ವ್ಯಸನದಿಂದ ಆಕರ್ಷಿತವಾಗದೇ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವತ್ತ ಯುವಪೀಳಿಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಲ್. ಆರ್ ಮಹದೇವಸ್ವಾಮಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯರಿಗೆ ಜನ್ಮ ಕೊಟ್ಟ ತಾಯಿಯ ಹೆಸರಲ್ಲಿ ಒಂದು ಗಿಡ ನೆಡುವಂತೆ ಮನವಿ ಮಾಡಿದ್ದಾರೆ, ಅದರಂತೆಯೇ ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮಕ್ಕ ರವರ 113ನೇ ವರ್ಷದ ಹುಟ್ಟುಹಬ್ಬ ಮನೆಗೊಂದು ಗಿಡ ಸಸಿ ವಿತರಣೆ ಮೂಲಕ ಆಯೋಜಿಸುತ್ತಿರುವುದು ಶ್ಲಾಘನೀಯವಾದ ಕೆಲಸವಾಗಿದೆ ಎಂದರು.

ಮಹಾರಾಜರ ಕಾಲದಲ್ಲಿ ನೆಟ್ಟ ಮರ ಗಿಡಗಳೇ ಇಂದು ದೊಡ್ಡದಾಗಿ ಬೆಳೆದಿದೆ. ಮೈಸೂರಿಗೆ ಪಾರಂಪರಿಕ ನಗರಿ ಎಂಬ ಹೆಸರು ಬರಲು ಇದು ಒಂದು ಕಾರಣ. ಇಂದಿಗೂ ಗುಬ್ಬಚ್ಚಿ ಶಾಲೆಯಲ್ಲಿ ಕಾಣಸಿಗುವ 115ವರ್ಷದ ಹಿಂದಿನ ಬಾಗೇಮರ ನೂರಾರು ವರ್ಷಗಳಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ನಿಸ್ವಾರ್ಥವಾಗಿ ನೆರಳು ಆಶ್ರಯ ನೀಡಿದೆ ಎಂದು ಹೇಳಿದರು.

ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ನಾರಾಯಣ ಗೌಡ ಮಾತನಾಡಿ, ಮನುಷ್ಯನಿಗೆ ಉತ್ತಮ ಆರೋಗ್ಯ ಸಿಗಬೇಕಾದರೆ ಸೊಪ್ಪು ತರಕಾರಿ ಪೌಷ್ಟಿಕಾಂಶವುಳ್ಳ ಆಹಾರ ಸೇವಿಸಬೇಕು ಹಾಗಾಗಿ ಮನೆಗಳ ತಾರಸಿಯ ಮೇಲೆ ಮತ್ತು ಮನೆಗಳ ಇಕ್ಕಲುಗಳಲ್ಲಿ ಒಂದು ಸುಂದರ ಉದ್ಯಾನ ನಿರ್ಮಿಸುವ ಗುರಿಯಿರಬೇಕು. ಇದರಿಂದ ಮನೆಯ ಸಣ್ಣಮಕ್ಕಳಲ್ಲಿ ಪರಿಸರ ಕಾಳಜಿ ಹೆಚ್ಚುತ್ತದೆ ಹಾಗೂ ಉತ್ತಮ ಗಾಳಿ ಸಿಗುತ್ತದೆ ಎಂದು ಹೇಳಿದರು.

ನಂತರ ಗುಬ್ಬಚ್ಚಿ ಶಾಲಾ ಮಕ್ಕಳಿಗೆ ಹೊಯ್ಸಳ ಕರ್ನಾಟಕ ಸಂಘದ ಅಧ್ಯಕ್ಷ ಕೆ.ಆರ್ ಸತ್ಯನಾರಯಣ ಪುಸ್ತಕ ಸಾಮಾಗ್ರಿಗಳನ್ನ ವಿತರಿಸಿದರು.

ಕಾರ್ಯಕ್ರಮದಲ್ಲಿ ಅಂಬಾಭವಾನಿ ಸಮಾಜ ಮಹಿಳಾ ಅಧ್ಯಕ್ಷರಾದ ಸವಿತಾ ಘಾಟ್ಕೆ, ವಕೀಲರಾದ ಜಯಶ್ರೀ ಶಿವರಾಮ್, ಕಟ್ಟೆ ಬಳಗದ ಅಧ್ಯಕ್ಷ ಸತ್ಯನಾರಾಯಣ, ಅಗಸ್ತ್ಯ ಸೊಸೈಟಿ ನಿರ್ದೇಶಕ ವಿಕ್ರಂ ಅಯ್ಯಂಗಾರ್, ಹಸಿರುಲೋಕ ಸಂಚಾಲಕರಾದ ಅಜಯ್ ಶಾಸ್ತ್ರಿ, ಚೇತನ್ ಕಾಂತರಾಜು, ಸುಚೀಂದ್ರ, ಸಚಿನ್ ನಾಯಕ, ರಮಾ, ಶಾಲೆಯ ಮುಖ್ಯೋಪಾಧ್ಯಾಯ ಮೋಹನ್, ಶಿಕ್ಷಕಿ ಚಂಪಕ, ಹಾಗೂ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

43 mins ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

44 mins ago

ಓದುಗರ ಪತ್ರ: 39 ಅಗತ್ಯ ಔಷಧಗಳ ಬೆಲೆ ಇಳಿಕೆ ಸ್ವಾಗತಾರ್ಹ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ರಾಷ್ಟ್ರೀಯ ಔಷದ ದರ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ೩೯ ಅಗತ್ಯ ಔಷಧಗಳ ಬೆಲೆ ಇಳಿಕೆಗೆ ಮಹತ್ವದ…

46 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ರಮಣ್ ಕಿಶೋರ್ ಎಂಬ ‘ಗಾಂವ್ ಕಾ ಡಾಕ್ಟರ್’

ಕುಗ್ರಾಮಗಳಲ್ಲಿ ವೈದ್ಯಕೀಯ ಶಿಬಿರಗಳ ಆಯೋಜನೆ ಬಿಹಾರದ ಪಟ್ನಾ ಜಿಲ್ಲೆಯ ದರ್ಭಾಂಗಾದ ಭುರವನ್ ಗ್ರಾಮದ ರಮಣ್ ಕಿಶೋರ್ ಅವರದ್ದು ಒಂದು ಸಾಧಾರಣ…

48 mins ago

ದೇವಸ್ಥಾನಗಳ ಅಭಿವೃದ್ಧಿಗೆ ಧಾರ್ಮಿಕ ಪ್ರವಾಸೋದ್ಯಮ ವರದಾನ

ಕೆ.ಬಿ.ರಮೇಶನಾಯಕ ಧಾರ್ಮಿಕತೆ ಹೆಸರಿನಲ್ಲಿ ನಿಷೇಧ ಹೇರಿದ್ದ ವಿಡಿಯೋ, ಫೋಟೋ ಚಿತ್ರೀಕರಣಕ್ಕೂ ಅವಕಾಶ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿರುವ ಹೆಸರಾಂತ ದೇವಸ್ಥಾನಗಳಿಗೆ…

51 mins ago

ಮಂಡ್ಯ ಜಿಲ್ಲೆಯ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ…

56 mins ago