ಮೈಸೂರು: ಸಿಎಂ ಸಿದ್ದರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ರಾಜ್ಯದಲ್ಲಿ ಪಗಡೆಯಾಟ ಅಂದುಕೊಂಡಿದ್ದು, ರಾಜಕೀಯ ದಾಳ ಅಸ್ತ್ರವನ್ನಾಗಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಜನವರಿ.17) ಈ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯನವರು ತಮ್ಮ ಮುಖ್ಯಮಂತ್ರಿ ಕುರ್ಚಿ ಅಲ್ಲಾಡುವಾಗ ಮಾತ್ರ ಜಾತಿಗಣತಿ ವರದಿ ನೆನಪಿಗೆ ಬರುತ್ತದೆ. ಅಲ್ಲದೇ ಈ ವರದಿಯೂ ಅವೈಜ್ಞಾನಿಕವಾಗಿದ್ದು, ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯದ ವಿರೋಧವಿದೆ ಎಂದರು.
ರಾಜ್ಯದಲ್ಲಿ ಜಾತಿಗಣತಿ ವರದಿ ಸೋರಿಕೆಯಾಗಿದ್ದು, ಗಣತಿ ಸರಿಯಾಗಿ ನಡೆದಿಲ್ಲ. ರಾಜ್ಯದಲ್ಲಿ ಎಲ್ಲ ಸಮುದಾಯವದರಿಗೆ ನ್ಯಾಯ ನೀಡುವುದಕ್ಕೆ ಬೆಂಬಲವಿದೆ. ಆದರೆ ಕೇವಲ ರಾಜಕೀಯಕ್ಕಾಗಿ ಜಾತಿಗಣತಿಯನ್ನಿಟ್ಟುಕೊಂಡು ಆಟವಾಡಬಾರದು ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ
ನಮ್ಮ ಪಕ್ಷದಲ್ಲಿ ಎಲ್ಲಾ ಗೊಂದಲಗಳು ಬೇಗನೆ ಬಗೆಹರಿಯಲಿದ್ದು, ಕೆಲವೇ ದಿನಗಳಲ್ಲಿ ಭಿನ್ನಮತೀಯರ ಮಾತುಗಳು ಸಹ ನಿಲ್ಲುತ್ತವೆ. ಮುಂದಿನ ದಿನಗಳಲ್ಲಿ ಪಕ್ಷದ ಶಾಸಕರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯಶಸ್ವಿಯಾಗಿ ಅಧ್ಯಕ್ಷ ಸ್ಥಾನವನ್ನು ನಿರ್ವಹಿಸಿಕೊಂಡು ಹೋಗುತ್ತೇನೆ. ಹೀಗಾಗಿ ಬಿಜೆಪಿ ಪಕ್ಷದಲ್ಲಿ ನಾನೇ ರಾಜ್ಯಾಧ್ಯಕ್ಷನಾಗಿ ಮುಂದುವರೆಯುತ್ತೇನೆ ಎಂದು ತಿಳಿಸಿದರು.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…