ಮೈಸೂರು ನಗರ

ಭಾರತೀಯಳಿಗೆ, ಕನ್ನಡತಿಗೆ ಬೂಕರ್‌ ಸಿಗಲೆಂದ ಪ್ರಾರ್ಥಿಸಿ ; ಲೇಖಕಿ ಬಾನು ಮುಷ್ತಾಕ್‌ ಮನವಿ

ಮೈಸೂರು: ‘ಬೂಕರ್‌ ಪ್ರಶಸ್ತಿಯ ಅಂತಿಮ ಪಟ್ಟಿಯಲ್ಲಿನ 6 ಕೃತಿಗಳಲ್ಲಿ ನನ್ನ ‘ಹಾರ್ಟ್‌ ಲ್ಯಾಂಪ್’ ಕಥಾಗುಚ್ಛ ಕೂಡ ಸ್ಥಾನ ಪಡೆದಿದೆ. ಮೇ 20ರಂದು ಲಂಡನ್‌ನಲ್ಲಿ ಪ್ರಶಸ್ತಿ ಘೋಷಣೆಯಾಗಲಿದ್ದು, ಮೂವರು ಮಕ್ಕಳೊಂದಿಗೆ ಹೋಗುತ್ತಿರುವೆ. ಪ್ಲೀಸ್‌, ಪ್ರೇ ಫಾರ್‌ ಮಿ– ಭಾರತೀಯಳಿಗೆ, ಕನ್ನಡತಿಗೆ ಬೂಕರ್ ಸಿಗಲೆಂದು ಪ್ರಾರ್ಥಿಸಿ’ ಎಂದು ಲೇಖಕಿ ಬಾನು ಮುಷ್ತಾಕ್ ಕೋರಿದರು.

ನಗರ ಜೆಎಲ್‌ಬಿ ರಸ್ತೆಯ ಎಂಜಿನಿಯರುಗಳ ಸಂಸ್ಥೆಯಲ್ಲಿ ಬುಧವಾರ, ತಮ್ಮ ಕೃತಿ ‘ಹಸೀನಾ ಮತ್ತು ಇತರ ಕಥೆಗಳು’ ಪರಿಷ್ಕೃತ ಮುದ್ರಣದ ಬಿಡುಗಡೆಯಲ್ಲಿ ಮಾತನಾಡಿದ ಅವರು, ಬರಹದ ಯಾನವನ್ನು ಓದುಗರಿಗೆ ತೆರೆದಿಟ್ಟರು.

‘ಗಿರೀಶ್‌ ಕಾಸರವಳ್ಳಿ ಅವರು ಚಲನಚಿತ್ರ ಮಾಡಲು ಎರಡು ದಶಕದ ಹಿಂದೆ ಹೆಣ್ಣು ಮಕ್ಕಳ ಕಥೆಗಳನ್ನು ಹುಡುಕಿ ಸುಸ್ತಾಗಿದ್ದರು. ಆಗೊಬ್ಬರು ನನ್ನ ‘ಕರಿ ನಾಗರಗಳು’ ಕಥೆಯನ್ನು ಹುಡುಕಿಕೊಟ್ಟಿದ್ದರು. ಈ ವಿಷಯ ನನಗೂ ಗೊತ್ತಾಯಿತು. ಆಗೆಲ್ಲ, ದಿನ ರಾತ್ರಿ ಕಾಸರವಳ್ಳಿ ಕರೆ ಮಾಡುತ್ತಾರೆ ಎಂದು ಕನಸು ಕಾಣುತ್ತಿದ್ದೆ. ಒಂದು ಮುಂಜಾನೆ ಕಾಸರವಳ್ಳಿ ಕರೆ ಮಾಡಿದ್ದರು. ನನಗೇನು ಆಶ್ಚರ್ಯವಾಗಿರಲಿಲ್ಲ. ಈಗಲೂ ಹಾಗೇ ಆಗುತ್ತದೆ ಎಂದುಕೊಂಡಿರುವೆ’ ಎಂದು ನಗೆಯುಕ್ಕಿಸಿದರು.

‘ಕರಿ ನಾಗರಗಳು’ ಕಥೆ ಹಸೀನಾ ಆಗಿ 2004ರಲ್ಲಿ ಬಿಡುಗಡೆಯಾಗಿತ್ತು. ಅದರ ಪ್ರೀಮಿಯರ್ ಪ್ರದರ್ಶನದಲ್ಲಿ ನಟಿ ತಾರಾ ನನ್ನ ಕುರ್ಚಿಯ ಪಕ್ಕ ಕೈ ಹಿಡಿದು ಕೂತು ನೋಡಿದ್ದರು. ಕಣ್ಣೀರು ತುಂಬಿ ನಿಮಗೆ ರಾಷ್ಟ್ರಪ್ರಶಸ್ತಿ ಬರುತ್ತದೆ ಎಂದಿದ್ದೆ. ಐಶ್ವರ್ಯ ರೈ ಮತ್ತು ತಾರಾ ನಡುವೆ ಪೈಪೋಟಿಯಿತ್ತು. ಕೊನೆಗೆ ನಾನು ಹೇಳಿದಂತೆ ಕನ್ನಡತಿಗೆ ಪ್ರಶಸ್ತಿ ಬಂದಿತ್ತು’ ಎಂದು ನೆನೆಪು ಮಾಡಿಕೊಂಡರು.

‘ನನ್ನ ಕಥೆಗಳನ್ನು ಇಂಗ್ಲಿಷ್‌ಗೆ ಯಾರಾದರೂ ಅನುವಾದ ಮಾಡುತ್ತಾರೆಯೇ ಎಂದು ಪತ್ರಕರ್ತ ಬಸವ ಬಿರಾದರ್ ಮೂರು ವರ್ಷದ ಹಿಂದೆ ಅವರನ್ನು ಕೇಳಿದ್ದೆ. ಅವರು ದೀಪಾ ಭಸ್ತಿ ಅವರ ಮೊಬೈಲ್‌ ನಂಬರ್‌ ಕೊಟ್ಟಿದ್ದರು. ಮಣಿಪಾಲದಲ್ಲಿ ಹೃದಯದ ಬೈಪಾಸ್‌ ಶಸ್ತ್ರಚಿಕಿತ್ಸೆ ನಡೆಯಲಿತ್ತು. ಆಗ ದೀಪಾ ಅವರು ಕರೆ ಮಾಡಿ ನಿಮ್ಮ ಕಥಾ ಸಂಕಲನ ಯುನೈಟೆಡ್‌ ಕಿಂಗ್‌ಡಮ್‌ ಅಲ್ಲಿಯೇ ಪ್ರಕಟವಾಗಬೇಕು, ಅನುಮತಿ ಬೇಕೆಂದು ಕೋರಿದ್ದರು. ನಾನೂ ಸಹಿ ಮಾಡಿದ್ದೆ. ಅದಕ್ಕೆ ‘ಪೆನ್‌’ ಪ್ರಶಸ್ತಿಯೂ ಸಿಕ್ಕಿತು. ಇದೀಗ ಬೂಕರ್‌ ಪ್ರಶಸ್ತಿಯ ಅಂತಿಮ ಪಟ್ಟಿವರೆಗೂ ಬರುತ್ತದೆಂದು ಅಂದುಕೊಂಡಿರಲಿಲ್ಲ’ ಎಂದರು.

ನಂತರ ನಡೆದ ಸಂವಾದದಲ್ಲಿ ಲೇಖಕಿ ಪ್ರೀತಿ ನಾಗರಾಜ್, ‘ನೀವೆಂದಾದರೂ ಬರಹಗಾರ್ತಿ ಆಗುತ್ತೇನೆ ಎಂದುಕೊಂಡಿದ್ದಿರಾ’ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಮದುವೆಯಾಗುತ್ತಲೇ ಕೆಲಸ ಬಿಡಬೇಕಾಯಿತು. ಅವಿಭಕ್ತ ಕುಟುಂಬ. ಹೀಗಾಗಿ ನಿರ್ಬಂಧಗಳೂ ಹೆಚ್ಚು. ಗಂಡನಿಗೆ ಹೆಂಡತಿ, ಮಕ್ಕಳ ತಾಯಿಯಾಗಿ ಜವಾಬ್ದಾರಿ ಹೆಚ್ಚಿದ್ದವು. ಮೂರು ವರ್ಷ ಮನೆಯಲ್ಲಿಯೇ ಇದ್ದೆ. ಆಮೇಲೆ ಬರಹವನ್ನು ಮುಂದುವರಿಸಿದೆ’ ಎಂದರು.

ಸಂವಾದದಲ್ಲಿ ವಿಶ್ರಾಂತ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ, ವಿಜ್ಞಾನ ಲೇಖಕಿ ಪದ್ಮಾ ಶ್ರೀರಾಮ, ‘ಮೈಸೂರು ಲಿಟ್ರರಿ ಫೋರಂ ಚಾರಿಟಬಲ್ ಟ್ರಸ್ಟ್’ನ ಶುಭಾ ಸಂಜಯ ಅರಸ್, ಪ್ರಕಾಶಕ ಅಭಿರುಚಿ ಗಣೇಶ್ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

6 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

7 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

7 hours ago

ಅಧಿಕಾರಿಗಳು ಜನಪ್ರತಿನಿಧಿಗಳ ಕರೆ ಸ್ವೀಕರಿಸಿ : ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಮುಖ್ಯಕಾರ್ಯದರ್ಶಿ ಖಡಕ್ ಸೂಚನೆ

ಬೆಂಗಳೂರು : ಅಧಿಕಾರಿಗಳು ಜನಪ್ರತಿನಿಧಿಗಳ ದೂರವಾಣಿ ಕರೆಯನ್ನು ಸ್ವೀಕರಿಸಲೇಬೇಕು ಎಂಬ ಸುತ್ತೋಲೆಯನ್ನು ಹೊರಡಿಸುವ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ…

8 hours ago

ಬುದ್ಧಗಯಾ ವಿಮೋಚನಾ ಚಳವಳಿ ಬೆಂಬಲಿಸಿ

ಮೈಸೂರು : ಹೊಸದಿಲ್ಲಿಯಲ್ಲಿ ಬುದ್ಧಗಯಾ ವಿಮೋಚನೆ ಐತಿಹಾಸಿಕ ಚಳವಳಿಯಲ್ಲಿ ಬೌದ್ಧ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಬೌದ್ಧ ಚಿಂತಕ,…

8 hours ago

ಮೈಸೂರಲ್ಲಿ ಸಂಭ್ರಮದ ರಥಸಪ್ತಮಿ

ಮೈಸೂರು : ರಥಸಪ್ತಮಿ ಅಂಗವಾಗಿ ನಗರದಲ್ಲಿ ಭಾನುವಾರ ಅರಮನೆ ಸೇರಿದಂತೆ ವಿವಿಧೆಡೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸೂರ್ಯನಿಗೆ ನಮಿಸಲಾಯಿತು.…

9 hours ago