Mysore
25
broken clouds

Social Media

ಸೋಮವಾರ, 18 ಮೇ 2026
Light
Dark

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಮಾಹಿತಿ ತಿಳಿದು ಬಂದೆ. ಅದು ಇರುವೆ ಕಚ್ಚಿ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಇಲ್ಲಿ ವೈದ್ಯರು ಹಾಗೇನು ಆಗಿಲ್ಲ ಅಂತ ಹೇಳುತ್ತಿದ್ದಾರೆ. ಈಗ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ಐಸಿಯು ಘಟಕದಲ್ಲಿ ಕಿಟಕಿಗಳ ಸೀಲಿಂಗ್ ಮಾಡಬೇಕಿದೆ. ಇದನ್ನು ರಾಜ್ಯ ಸರ್ಕಾರ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲಿ ಶುದ್ಧ ಕುಡಿಯುವ ನೀರಿನ‌ ಕೊರತೆ ಇದೆ ಎಂದು ತಿಳಿದು ಬಂದಿದೆ. ಆ ಸಮಸ್ಯೆಯನ್ನ ಕೂಡಲೇ ಸರಿಪಡಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಇಂತಹ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೂಡ ಹೇಳಿದ್ದೇನೆ. ಚಲುವಾಂಬ ಆಸ್ಪತ್ರೆಯಲ್ಲಿ ಕೇವಲ 9 ತಿಂಗಳ ಅವಧಿಯಲ್ಲಿ 349 ಶಿಶು ಮರಣ ಆಗಿದೆ ಎಂದು ತಿಳಿದು ಬಂದಿದೆ. ಇದು ಆತಂಕಕಾರಿ ಬೆಳವಣಿಗೆ. ಯಾವ ಒಂದು ಮಗುವೂ ಸಾಯಬಾರದು. ಹಿಂದಿನ ರೇಷಿಯೊ ಹಾಗೂ ಈಗಿನ ರೇಷಿಯೋ ನೋಡಿ ಶಿಶು ಮರಣ ತಾಳೆ ಮಾಡಬೇಕಿದೆ. ಅದಕ್ಕೆ ತಕ್ಕಂತೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಬೇಕು. ಸರ್ಕಾರಿ ಆಸ್ಪತ್ರೆ ಅಂದರೆ ವೈದ್ಯರ ಕೊರತೆ, ಕೆ.ಆರ್ ಆಸ್ಪತ್ರೆ ಒಂದೇ ಅಲ್ಲ ಎಲ್ಲಾ ಕಡೆ ಇದೆ. ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಇಲ್ಲಿನ ಸಮಸ್ಯೆಯನ್ನ ಪರಿಹರಿಸುವಂತೆ ಒತ್ತಾಯಿಸುತ್ತೇನೆ. ಜೊತೆಗೆ ಎಲ್ಲಾ ಬಡ ರೊಗಿಗಳ ಬಳಿ ಲಂಚ ಪಡೆಯುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

 

Tags:
error: Content is protected !!