ಮೈಸೂರು ನಗರ

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಮಾಹಿತಿ ತಿಳಿದು ಬಂದೆ. ಅದು ಇರುವೆ ಕಚ್ಚಿ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಇಲ್ಲಿ ವೈದ್ಯರು ಹಾಗೇನು ಆಗಿಲ್ಲ ಅಂತ ಹೇಳುತ್ತಿದ್ದಾರೆ. ಈಗ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ಐಸಿಯು ಘಟಕದಲ್ಲಿ ಕಿಟಕಿಗಳ ಸೀಲಿಂಗ್ ಮಾಡಬೇಕಿದೆ. ಇದನ್ನು ರಾಜ್ಯ ಸರ್ಕಾರ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲಿ ಶುದ್ಧ ಕುಡಿಯುವ ನೀರಿನ‌ ಕೊರತೆ ಇದೆ ಎಂದು ತಿಳಿದು ಬಂದಿದೆ. ಆ ಸಮಸ್ಯೆಯನ್ನ ಕೂಡಲೇ ಸರಿಪಡಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಇಂತಹ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೂಡ ಹೇಳಿದ್ದೇನೆ. ಚಲುವಾಂಬ ಆಸ್ಪತ್ರೆಯಲ್ಲಿ ಕೇವಲ 9 ತಿಂಗಳ ಅವಧಿಯಲ್ಲಿ 349 ಶಿಶು ಮರಣ ಆಗಿದೆ ಎಂದು ತಿಳಿದು ಬಂದಿದೆ. ಇದು ಆತಂಕಕಾರಿ ಬೆಳವಣಿಗೆ. ಯಾವ ಒಂದು ಮಗುವೂ ಸಾಯಬಾರದು. ಹಿಂದಿನ ರೇಷಿಯೊ ಹಾಗೂ ಈಗಿನ ರೇಷಿಯೋ ನೋಡಿ ಶಿಶು ಮರಣ ತಾಳೆ ಮಾಡಬೇಕಿದೆ. ಅದಕ್ಕೆ ತಕ್ಕಂತೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಬೇಕು. ಸರ್ಕಾರಿ ಆಸ್ಪತ್ರೆ ಅಂದರೆ ವೈದ್ಯರ ಕೊರತೆ, ಕೆ.ಆರ್ ಆಸ್ಪತ್ರೆ ಒಂದೇ ಅಲ್ಲ ಎಲ್ಲಾ ಕಡೆ ಇದೆ. ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಇಲ್ಲಿನ ಸಮಸ್ಯೆಯನ್ನ ಪರಿಹರಿಸುವಂತೆ ಒತ್ತಾಯಿಸುತ್ತೇನೆ. ಜೊತೆಗೆ ಎಲ್ಲಾ ಬಡ ರೊಗಿಗಳ ಬಳಿ ಲಂಚ ಪಡೆಯುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

3 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

7 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

8 hours ago

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ 11ನೇ ನೀತಿ ಆಯೋಗದ ಸಭೆ

ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…

8 hours ago

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…

12 hours ago

ಕೇರಳದಲ್ಲಿ ಮತ್ತೆ ನಿಫಾ ವೈರಸ್‌ ಪತ್ತೆ: ಆರೋಗ್ಯ ಇಲಾಖೆಯಿಂದ ಹೈಅಲರ್ಟ್‌

ಕೋಯಿಕ್ಕೋಡ್:‌ ವಯನಾಡು, ಕೋಯಿಕ್ಕೋಡ್‌ನಲ್ಲಿ ಶಿಗೆಲ್ಲಾ ವೈರಸ್‌ ಸೋಂಕು ಹರಡಿರುವ ನಡುವೆ ನಿಫಾ ವೈರಸ್‌ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…

12 hours ago