ಮೈಸೂರು ನಗರ

ಚಲುವಾಂಬ ಆಸ್ಪತ್ರೆಯಲ್ಲಿ ಮಗು ಸಾವು ಪ್ರಕರಣ: ಸಂಸದ ಯದುವೀರ್‌ ಒಡೆಯರ್‌ ಪ್ರತಿಕ್ರಿಯೆ.!

ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿದೆ ಎಂಬ ಮಾಹಿತಿ ತಿಳಿದು ಬಂದೆ. ಅದು ಇರುವೆ ಕಚ್ಚಿ ಸಾವಾಗಿದೆ ಎಂದು ಪೋಷಕರು ಆರೋಪ ಮಾಡಿದ್ದಾರೆ. ಇಲ್ಲಿ ವೈದ್ಯರು ಹಾಗೇನು ಆಗಿಲ್ಲ ಅಂತ ಹೇಳುತ್ತಿದ್ದಾರೆ. ಈಗ ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ನಿಖರ ಕಾರಣ ತಿಳಿದು ಬರಲಿದೆ. ಐಸಿಯು ಘಟಕದಲ್ಲಿ ಕಿಟಕಿಗಳ ಸೀಲಿಂಗ್ ಮಾಡಬೇಕಿದೆ. ಇದನ್ನು ರಾಜ್ಯ ಸರ್ಕಾರ ಇದರ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಲ್ಲಿ ಶುದ್ಧ ಕುಡಿಯುವ ನೀರಿನ‌ ಕೊರತೆ ಇದೆ ಎಂದು ತಿಳಿದು ಬಂದಿದೆ. ಆ ಸಮಸ್ಯೆಯನ್ನ ಕೂಡಲೇ ಸರಿಪಡಿಸಲು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮುಂದೆ ಇಂತಹ ಘಟನೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕೂಡ ಹೇಳಿದ್ದೇನೆ. ಚಲುವಾಂಬ ಆಸ್ಪತ್ರೆಯಲ್ಲಿ ಕೇವಲ 9 ತಿಂಗಳ ಅವಧಿಯಲ್ಲಿ 349 ಶಿಶು ಮರಣ ಆಗಿದೆ ಎಂದು ತಿಳಿದು ಬಂದಿದೆ. ಇದು ಆತಂಕಕಾರಿ ಬೆಳವಣಿಗೆ. ಯಾವ ಒಂದು ಮಗುವೂ ಸಾಯಬಾರದು. ಹಿಂದಿನ ರೇಷಿಯೊ ಹಾಗೂ ಈಗಿನ ರೇಷಿಯೋ ನೋಡಿ ಶಿಶು ಮರಣ ತಾಳೆ ಮಾಡಬೇಕಿದೆ. ಅದಕ್ಕೆ ತಕ್ಕಂತೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಕೊಡಬೇಕು. ಸರ್ಕಾರಿ ಆಸ್ಪತ್ರೆ ಅಂದರೆ ವೈದ್ಯರ ಕೊರತೆ, ಕೆ.ಆರ್ ಆಸ್ಪತ್ರೆ ಒಂದೇ ಅಲ್ಲ ಎಲ್ಲಾ ಕಡೆ ಇದೆ. ಸರ್ಕಾರಕ್ಕೆ ಶೀಘ್ರದಲ್ಲೇ ಪತ್ರ ಬರೆದು ಇಲ್ಲಿನ ಸಮಸ್ಯೆಯನ್ನ ಪರಿಹರಿಸುವಂತೆ ಒತ್ತಾಯಿಸುತ್ತೇನೆ. ಜೊತೆಗೆ ಎಲ್ಲಾ ಬಡ ರೊಗಿಗಳ ಬಳಿ ಲಂಚ ಪಡೆಯುತ್ತಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ. ಅಂತವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ವಹಿಸಲಾಗುತ್ತದೆ ಎಂದು ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

10 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

21 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

21 hours ago