ಮೈಸೂರು: ಬಹುರೂಪಿ ಬಾಬಾಸಾಹೇಬ್ ರಾಷ್ಟ್ರೀಯ ನಾಟಕೋತ್ಸವ–2026ರ ಅಂಗವಾಗಿ ಮೈಸೂರಿನ ಕಲಾಮಂದಿರದಲ್ಲಿ ನಡೆಯುತ್ತಿರುವ ಮಕ್ಕಳ ನಾಟಕ ಪ್ರದರ್ಶನದಲ್ಲಿ ಇಂದು ಪ್ರದರ್ಶಿತವಾದ “ಸೂರ್ಯ–ಚಂದ್ರ” ಮಕ್ಕಳ ನಾಟಕ ಪ್ರೇಕ್ಷಕರ ಮನ ಗೆದ್ದಿದೆ.
ಡಾ. ಶಿವರಾಮ ಕಾರಂತರವರ ರಚನೆಯಾಗಿರುವ ಈ ನಾಟಕವನ್ನು ರೋಹಿತ್ ಎಸ್. ಬೈಕಾಡಿ ಅವರು ನಿರ್ದೇಶನ ಮಾಡಿದ್ದು, ತೆಕ್ಕಟ್ಟೆಯ ಧಮನಿ ತಂಡದ ಪುಟಾಣಿ ಕಲಾವಿದರು ಅಭಿನಯಿಸಿದರು. ವಿವಿಧ ಶಾಲೆಗಳಿಂದ ಬಂದಿದ್ದ ವಿದ್ಯಾರ್ಥಿಗಳು ನಾಟಕವನ್ನು ಕುತೂಹಲದಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಾಟಕ ಪ್ರದರ್ಶನದ ಬಳಿಕ ಮಾತನಾಡಿದ ಪುಟಾಣಿ ಕಲಾವಿದರು, ಬಹುರೂಪಿ ನಾಟಕೋತ್ಸವದಂತಹ ಪ್ರತಿಷ್ಠಿತ ವೇದಿಕೆಯಲ್ಲಿ ಅಭಿನಯಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಮೈಸೂರಿಗೆ ಬಂದು ಇಂತಹ ದೊಡ್ಡ ವೇದಿಕೆಯಲ್ಲಿ ನಾಟಕ ಪ್ರದರ್ಶಿಸಿದ್ದೇವೆ ಎಂದು ಹೇಳಿಕೊಳ್ಳಲು ಖುಷಿಯಾಗುತ್ತಿದೆ ಎಂದು ಹೇಳಿದರು.
ವೇದಿಕೆಗೆ ತೆರಳುವ ಮೊದಲು ಇದು ದೊಡ್ಡ ವೇದಿಕೆ ಎಂಬ ಅರಿವು ನಮಗೆ ಇರಲಿಲ್ಲ. ಆದರೆ ಸ್ಟೇಜ್ ಮೇಲೆ ಬೆಳಕು ಬೆಳಗುತ್ತಿದ್ದಂತೆಯೇ, ಭಾರಿ ಸಭಾಂಗಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರೇಕ್ಷಕರು ಇದ್ದಾರೆ ಎಂಬುದು ಗೊತ್ತಾಯಿತು. ಆ ಕ್ಷಣದಲ್ಲಿ ಸ್ವಲ್ಪ ಆತಂಕವಾಯಿತು. ಆದರೆ ನಮ್ಮ ಶಿಕ್ಷಕರು ಭಯಪಡಬಾರದು, ಧೈರ್ಯದಿಂದ ಅಭಿನಯಿಸಬೇಕು ಎಂದು ಹೇಳಿದ ಮಾತು ನೆನಪಾಯಿತು. ಆ ಧೈರ್ಯದಿಂದ ನಾವು ಅಭಿನಯವನ್ನು ಯಶಸ್ವಿಯಾಗಿ ನೆರವೇರಿಸಿದ್ದೇವೆ ಎಂದು ಪುಟಾಣಿ ಕಲಾವಿದರು ತಮ್ಮ ಅನುಭವ ಹಂಚಿಕೊಂಡರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹಲವು ದಿನಗಳ ನಂತರ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಗೋಪಿನಾಥಂ ಸಫಾರಿಯಲ್ಲಿ…
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…