ಮೈಸೂರು: ಆನ್ಲೈನ್ ಬೆಟ್ಟಿಂಗ್ ಮತ್ತು ಗೇಮ್ಗಳಿಂದ ಹಲವಾರು ಅನಾಹುತಗಳಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಷೇಧಿಸಬೇಕು ಎಂದು ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿಂದು ಮಾತನಾಡಿದ ಅವರು, ಇತ್ತೀಚೆಗೆ ಆನ್ಲೈನ್ ಬೆಟ್ಟಿಂಗ್ ಹಾಗೂ ಆನ್ಲೈನ್ ಗೇಮಿಂಗ್ ವೆಬ್ಸೈಟ್ಗಳಿಂದ ಹಲವು ಕುಟುಂಬಗಳು ಬೀದಿಗೆ ಬಂದಿವೆ. ಅಲ್ಲದೇ, ಈ ದುಶ್ಚಟದಿಂದ ಹಲವಾರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇಂದು ಅಧಿಕವಾಗಿ ಯುವಕ–ಯುವತಿಯರೇ ಆನ್ಲೈನ್ ಬೆಟ್ಟಿಂಗ್ ಜಾಲಕ್ಕೆ ಸಿಲುಕಿರುವವರಾಗಿದ್ದಾರೆ. ಪದವಿ ಪಡೆದು ಉದ್ಯೋಗ ಗಳಿಸಿ ಕುಟುಂಬದ ಜವಾಬ್ದಾರಿ ನೋಡಿಕೊಳ್ಳಬೇಕಾದ ಸಮಯದಲ್ಲಿ ಬೆಟ್ಟಿಂಗ್ ಜಾಲದಲ್ಲಿ ಸಿಲುಕಿ ನರಳುತ್ತಿದ್ದಾರೆ. ಅಲ್ಲದೇ, ಸಾವಿರಾರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿವೆ. ಉನ್ನತ ಸ್ಥಾನದಲ್ಲಿರುವ ತಾವು ಜಾಣ ಮೌನಕ್ಕೆ ಶರಣಾಗಿರುವುದು ತಮ್ಮ ಹುದ್ದೆಗಳಿಗೆ ಘನತೆ ತರುವುದಿಲ್ಲ ಎಂದು ಕಿವಿಮಾತು ಹೇಳಿದರು.
ಅನಧಿಕೃತವಾಗಿ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ರಾಜ್ಯದ ಕೆಲವು ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇದರ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…