ಮೈಸೂರು: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭಿಪ್ರಾಯ ಪಟ್ಟಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇರಳ ಸರ್ಕಾರ ಕೂಡ ಐದು ಬಾರಿ ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡುವಂತೆ ಮನವಿ ಮಾಡಿತ್ತು. ಈ ಹಿಂದೆ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದ ವೇಳೆಯೂ ರಾತ್ರಿ ಸಂಚಾರ ನಿರ್ಬಂಧ ತೆರವು ಸಾಧ್ಯವಿಲ್ಲ ಎಂದು ಆದೇಶ ಹೊರಡಿಸಿದ್ದರು. ಆದರೆ ಈಗ ಯಾಕೆ ಈ ರೀತಿ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ನನಗೆ ಗೊತ್ತಾಗುತ್ತಿಲ್ಲ ಎಂದರು.
ಇನ್ನು ರಾತ್ರಿ ಸಂಚಾರ ನಿರ್ಬಂಧ ತೆರವು ಮಾಡದಂತೆ ಹೈಕೋರ್ಟ್ ಆದೇಶ ಕೂಡ ಇದೆ. ಯಾವುದೇ ಕಾರಣಕ್ಕೂ ರಾತ್ರಿ ಸಂಚಾರ ನಿರ್ಬಂಧ ಸಾಧ್ಯವಿಲ್ಲ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮೈಸೂರು ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಉಡಾನ್ ಯೋಜನೆಯಡಿ ವಿಮಾನಗಳ ಹಾರಾಟಕ್ಕೆ ಉತ್ತೇಜನ ನೀಡಲಾಗುತ್ತಿದೆ. ಎರಡು ಮೂರು ವಿಮಾನಯಾನ ಸಂಸ್ಥೆಗಳ ಜೊತೆ ವಿಮಾನಗಳ ಹಾರಾಟ ಸಂಬಂಧ ಮಾತುಕತೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಇನ್ನು ಕೆಂಪೇಗೌಡ ವೃತ್ತದ ಬಳಿ ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಭೂಸಾರಿಗೆ ಇಲಾಖೆ ಸಚಿವ ನಿತಿನ್ ಗಡ್ಕರಿ ಅವರು ಅನುಮೋದನೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…