ಮೈಸೂರು: ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲಿನ ದಾಳಿ ಖಂಡಿಸಿ ಮೈಸೂರಿನಲ್ಲಿಂದು ವಿವಿಧ ವೃತ್ತಗಳಲ್ಲಿ ಹಿಂದು ಹಿತರಕ್ಷಣಾ ವೇದಿಕೆ ವತಿಯಿಂದ ಮೌನ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಚಾಮುಂಡಿಪುರಂ, ವೇದಾಂತ ಹೆಮ್ಮಿಗೆ ವೃತ್ತ, ರಾಮಸ್ವಾಮಿ ವೃತ್ತ, ಗನ್ ಹೌಸ್ ವೃತ್ತ, ನ್ಯಾಯಾಲಯದ ಮುಂಭಾಗ ಸೇರಿದಂತೆ ನಗರದ ಪ್ರಮುಖ 30 ವೃತ್ತದಲ್ಲಿ ಭಿತ್ತಿ ಪತ್ರ ಹಿಡಿದು ಮೌನ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಬಾಂಗ್ಲಾ ದೇಶದಲ್ಲಿ ಹಿಂದುಗಳ ಮೇಲೆ ಮೂಲಭೂತವಾದಿಗಳು ಮಾಡುತ್ತಿರುವ ಹಿಂಸಾಚಾರ ಖಂಡನೀಯ.
ಬಾಂಗ್ಲಾದಲ್ಲಿ ಅರಾಜಕತೆ ಉಂಟಾಗಿದ್ದು, ಹಿಂದುಗಳ ಮನೆ, ಅಂಗಡಿ, ದೇವಸ್ಥಾನಗಳ ಮೇಲೆ ಹಲವು ದಾಳಿ ನಡೆಸಲಾಗಿದೆ. ಅತ್ಯಾಚಾರ, ಹತ್ಯೆ ಹಾಗೂ ಆಸ್ತಿನಾಶದಂತಹ ಅಮಾನವೀಯ ಕೃತ್ಯ ಎಸಗಲಾಗುತ್ತಿದೆ. ಅಲ್ಲಿನ ಸೇನೆಯು ಇದನ್ನು ತಡೆಯಲು ಪ್ರಯತ್ನ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಮುಂದಾದ್ರೂ ಹಿಂದುಗಳ ಮೇಲೆ ದಾಳಿ ಮಾಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸೇನೆ ಕಟ್ಟೆಚ್ಚರ ವಹಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಹಿಂದೂ ಹಿತರಕ್ಷಣಾ ಸಮಿತಿಯ ಸಂಚಾಲಕರಾದ ಮಹೇಶ್, ರಂಗಸ್ವಾಮಿ, ಗಿರೀಶ್, ಸಂತೋಷ್, ವಿಕ್ರಂ ಅಯ್ಯಂಗಾರ್ ಸೇರಿದಂತ ಹಲವರು ಭಾಗಿಯಾಗಿದ್ದರು.
ಗುಂಡ್ಲುಪೇಟೆ : ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಣೆ ಪ್ರದೇಶದ ಮದ್ದೂರು ವಲಯ ವ್ಯಾಪ್ತಿಯ ಚನ್ನಮಲ್ಲಿಪುರ-ಬೇರಂಬಾಟಿ ಕಗ್ಗಳಹುಂಡಿ ಭಾಗದಲ್ಲಿ ಉಪಟಳ ನೀಡುತ್ತಿದ್ದ…
ಅಯೋಧ್ಯೆ : ಅಯೋಧ್ಯೆ ರಾಮಮಂದಿರದಲ್ಲಿ ರಾಮನವಮಿ ಸಂಭ್ರಮ ಮನೆ ಮಾಡಿದೆ. ಈ ಶುಭ ಸಂದರ್ಭದಲ್ಲಿ ಬಾಲರಾಮನ ಹಣೆಯ ಮೇಲೆ ಸೂರ್ಯ…
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…