g parmeshwar
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಒಂದು ಸಮುದಾಯವನ್ನು ಬಿಟ್ಟು ದಸರಾ ಮಾಡಲು ಆಗುತ್ತಾ ಎಂದು ಪ್ರಶ್ನೆ ಮಾಡಿದ್ದಾರೆ.
ಲೇಖಕಿ ಬಾನು ಮುಷ್ತಾಕ್ರಿಂದ ದಸರಾ ಉದ್ಘಾಟನೆಗೆ ವಿರೋಧ ವ್ಯಕ್ತವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್ ಅವರು, ಈ ಹಿಂದೆ ನಿಸ್ಸಾರ್ ಅಹಮದ್ ದಸರಾ ಉದ್ಘಾಟನೆ ಮಾಡಿದ್ದಾರೆ. ಮಿರ್ಜಾ ಇಸ್ಮಾಯಿಲ್ ಮೈಸೂರಿನಲ್ಲಿ ದಿವಾನರಾಗಿದ್ದರು. ದಸರಾ ಉದ್ಘಾಟನೆ ಬಗ್ಗೆ ವಿರೋಧ ಮಾಡೋದು ಸರಿಯಿಲ್ಲ. ಇದು ಧಾರ್ಮಿಕ ವಿಚಾರ ಅಲ್ಲ. ಇದು ನಾಡಹಬ್ಬ ದಸರಾ ಮಹೋತ್ಸವ. ಆದ್ದರಿಂದ ಒಂದು ಸಮುದಾಯವನ್ನು ಬಿಟ್ಟು ದಸರಾ ಮಾಡಲು ಆಗುತ್ತಾ? ಎಂದು ಬಾನು ಮುಷ್ತಾಕ್ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಇನ್ನು ಗೃಹ ಇಲಾಖೆಯಲ್ಲಿ ಲಂಚಾವತಾರ ಎಂಬ ಮಾಜಿ ಸಚಿವ ಸಾ.ರಾ.ಮಹೇಶ್ ಆರೋಪ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಾ.ರಾ.ಮಹೇಶ್ ಈ ಹಿಂದೆ ಮಂತ್ರಿ ಆಗಿದ್ದವರು. ಜವಾಬ್ದಾರಿಯುತ ಮುಖಂಡರು. ಯಾರು ಹಣ ಪಡೆದ್ರು, ಯಾರು ಕೊಟ್ರು?. ಈ ಬಗ್ಗೆ ದೂರು ಕೊಟ್ಟರೆ ತನಿಖೆ ಮಾಡಿಸುತ್ತೇವೆ. ಲಂಚ ಕೊಡೋದು ಗೊತ್ತಿದ್ರೆ ರೈಟಿಂಗ್ ಅಲ್ಲಿ ದೂರು ಕೊಡಲಿ ಎಂದು ಹೇಳಿದರು.
ಇನ್ನು ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಆರ್ಎಸ್ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಆ ಬಗ್ಗೆ ನಾನು ಉತ್ತರ ಕೊಡಲ್ಲ. ನನ್ನನ್ನು ಕೇಳಬೇಡಿ ಎಂದು ಜಾರಿಕೊಂಡರು.
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…