Mysore
31
overcast clouds

Social Media

ಶನಿವಾರ, 23 ಮೇ 2026
Light
Dark

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕರಿಸಿ ನನಗಿಂತ ದೊಡ್ಡವಳಾಗಿರುವ ಅಕ್ಕನಿಗೆ ಜನಿವಾರ ಹಾಕುವಂತೆ ಹೇಳುತ್ತಾರೆ. ಆಗ ಆಕೆ ಹೆಣ್ಣು ಎಂದು ಹೇಳಿದಾಗ ಲಿಂಗ ತಾರತಮ್ಯ ವಿರೋಧಿಸಿದ ಬಸವಣ್ಣ ಸಾಮಾಜಿಕ ಚಳುವಳಿಗೆ ಮುಂದಾದರು. ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಕಾರಣರು. ಬಸವಣ್ಣನವರು ನಮಗೆ ದೊಡ್ಡ ಪ್ರೇರಣಾ ಶಕ್ತಿ. ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬುದ್ದ, ಬಸವ, ನಾರಾಯಣಗುರು, ಪುಲೆ, ಪೆರಿಯಾರ್, ಗಾಂಧೀಜಿ, ಅಂಬೇಡ್ಕರ್ ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಾಣ ಮಾಡಿದ್ದಾರೆ. 800 ವರ್ಷಗಳ ಹಿಂದೆಯೇ ಅನುಭವಮಂಟಪ ನಿರ್ಮಾಣ ಮಾಡಿದರು. ಅಲ್ಲಮಪ್ರಭು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಈಗ ಮಹಿಳಾ ಮೀಸಲಾತಿ ಬಿಲ್ ಮಂಡನೆಗೆ ಮುಂದಾಗಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಸೋಲುಂಟು ಆಗುವಂತೆ ಮಾಡಿದ್ದು ಸನಾತನ ಮನಸ್ಥಿತಿಯವರು.
ಬುದ್ದ ಬಸವ ಅಂಬೇಡ್ಕರ್ ದೊಡ್ಡ ಪ್ರಜಾಪ್ರಭುತ್ವ ವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ. ಸಿದ್ದರಾಮಯ್ಯ ಹಾಗು ನಾನು ಬಸವಣ್ಣನವರ ಅನುಯಾಯಿಗಳು ಎಂದು ಹೇಳಿದರು.

 

 

Tags:
error: Content is protected !!