ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕರಿಸಿ ನನಗಿಂತ ದೊಡ್ಡವಳಾಗಿರುವ ಅಕ್ಕನಿಗೆ ಜನಿವಾರ ಹಾಕುವಂತೆ ಹೇಳುತ್ತಾರೆ. ಆಗ ಆಕೆ ಹೆಣ್ಣು ಎಂದು ಹೇಳಿದಾಗ ಲಿಂಗ ತಾರತಮ್ಯ ವಿರೋಧಿಸಿದ ಬಸವಣ್ಣ ಸಾಮಾಜಿಕ ಚಳುವಳಿಗೆ ಮುಂದಾದರು. ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಕಾರಣರು. ಬಸವಣ್ಣನವರು ನಮಗೆ ದೊಡ್ಡ ಪ್ರೇರಣಾ ಶಕ್ತಿ. ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬುದ್ದ, ಬಸವ, ನಾರಾಯಣಗುರು, ಪುಲೆ, ಪೆರಿಯಾರ್, ಗಾಂಧೀಜಿ, ಅಂಬೇಡ್ಕರ್ ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಾಣ ಮಾಡಿದ್ದಾರೆ. 800 ವರ್ಷಗಳ ಹಿಂದೆಯೇ ಅನುಭವಮಂಟಪ ನಿರ್ಮಾಣ ಮಾಡಿದರು. ಅಲ್ಲಮಪ್ರಭು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಈಗ ಮಹಿಳಾ ಮೀಸಲಾತಿ ಬಿಲ್ ಮಂಡನೆಗೆ ಮುಂದಾಗಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಸೋಲುಂಟು ಆಗುವಂತೆ ಮಾಡಿದ್ದು ಸನಾತನ ಮನಸ್ಥಿತಿಯವರು.
ಬುದ್ದ ಬಸವ ಅಂಬೇಡ್ಕರ್ ದೊಡ್ಡ ಪ್ರಜಾಪ್ರಭುತ್ವ ವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ. ಸಿದ್ದರಾಮಯ್ಯ ಹಾಗು ನಾನು ಬಸವಣ್ಣನವರ ಅನುಯಾಯಿಗಳು ಎಂದು ಹೇಳಿದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…