ಮೈಸೂರು ನಗರ

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕರಿಸಿ ನನಗಿಂತ ದೊಡ್ಡವಳಾಗಿರುವ ಅಕ್ಕನಿಗೆ ಜನಿವಾರ ಹಾಕುವಂತೆ ಹೇಳುತ್ತಾರೆ. ಆಗ ಆಕೆ ಹೆಣ್ಣು ಎಂದು ಹೇಳಿದಾಗ ಲಿಂಗ ತಾರತಮ್ಯ ವಿರೋಧಿಸಿದ ಬಸವಣ್ಣ ಸಾಮಾಜಿಕ ಚಳುವಳಿಗೆ ಮುಂದಾದರು. ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಕಾರಣರು. ಬಸವಣ್ಣನವರು ನಮಗೆ ದೊಡ್ಡ ಪ್ರೇರಣಾ ಶಕ್ತಿ. ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬುದ್ದ, ಬಸವ, ನಾರಾಯಣಗುರು, ಪುಲೆ, ಪೆರಿಯಾರ್, ಗಾಂಧೀಜಿ, ಅಂಬೇಡ್ಕರ್ ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಾಣ ಮಾಡಿದ್ದಾರೆ. 800 ವರ್ಷಗಳ ಹಿಂದೆಯೇ ಅನುಭವಮಂಟಪ ನಿರ್ಮಾಣ ಮಾಡಿದರು. ಅಲ್ಲಮಪ್ರಭು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಈಗ ಮಹಿಳಾ ಮೀಸಲಾತಿ ಬಿಲ್ ಮಂಡನೆಗೆ ಮುಂದಾಗಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಸೋಲುಂಟು ಆಗುವಂತೆ ಮಾಡಿದ್ದು ಸನಾತನ ಮನಸ್ಥಿತಿಯವರು.
ಬುದ್ದ ಬಸವ ಅಂಬೇಡ್ಕರ್ ದೊಡ್ಡ ಪ್ರಜಾಪ್ರಭುತ್ವ ವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ. ಸಿದ್ದರಾಮಯ್ಯ ಹಾಗು ನಾನು ಬಸವಣ್ಣನವರ ಅನುಯಾಯಿಗಳು ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

2 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

2 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

2 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

2 hours ago

ಅಕ್ರಮ ಮದ್ಯ ಮಾರಾಟ: ಕಡಿವಾಣ ಕಾರ್ಯಾಚರಣೆ

ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್‌ನಲ್ಲಿ ನಡೆದ…

2 hours ago

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

4 hours ago