ಮೈಸೂರು ನಗರ

ಸಮ ಸಮಾಜದ ನಿರ್ಮಾಣಕ್ಕೆ ಬಸವಣ್ಣನವರೇ ಕಾರಣರು: ಸಚಿವ ಎಚ್.ಸಿ.ಮಹದೇವಪ್ಪ

ಮೈಸೂರು: ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ತಿಳಿಸಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ ಬಸವಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ಬಸವಣ್ಣ 8ನೇ ವಯಸ್ಸಿನಲ್ಲಿ ಜನಿವಾರ ಧರಿಸುವ ಸಂದರ್ಭ ಬಂದಾಗ ಧಿಕ್ಕರಿಸಿ ನನಗಿಂತ ದೊಡ್ಡವಳಾಗಿರುವ ಅಕ್ಕನಿಗೆ ಜನಿವಾರ ಹಾಕುವಂತೆ ಹೇಳುತ್ತಾರೆ. ಆಗ ಆಕೆ ಹೆಣ್ಣು ಎಂದು ಹೇಳಿದಾಗ ಲಿಂಗ ತಾರತಮ್ಯ ವಿರೋಧಿಸಿದ ಬಸವಣ್ಣ ಸಾಮಾಜಿಕ ಚಳುವಳಿಗೆ ಮುಂದಾದರು. ಸಮಸಮಾಜದ ನಿರ್ಮಾಣಕ್ಕೆ ಬಸವಣ್ಣ ಕಾರಣರು. ಬಸವಣ್ಣನವರು ನಮಗೆ ದೊಡ್ಡ ಪ್ರೇರಣಾ ಶಕ್ತಿ. ವರ್ಣಾಶ್ರಮದ ವಿರುದ್ಧ ವಚನ ಸಾಹಿತ್ಯ ಮೂಲಕ ಜನರಿಗೆ ಅರ್ಥವಾಗುವ ರೀತಿ ಹೋರಾಡಿದ ಸಮಾಜ ಸುಧಾರಕ ಬಸವಣ್ಣ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಬುದ್ದ, ಬಸವ, ನಾರಾಯಣಗುರು, ಪುಲೆ, ಪೆರಿಯಾರ್, ಗಾಂಧೀಜಿ, ಅಂಬೇಡ್ಕರ್ ಸಮಾಜದ ಸುಧಾರಣೆಯಲ್ಲಿ ತೊಡಗಿಸಿಕೊಂಡು ಚರಿತ್ರೆ ನಿರ್ಮಾಣ ಮಾಡಿದ್ದಾರೆ. 800 ವರ್ಷಗಳ ಹಿಂದೆಯೇ ಅನುಭವಮಂಟಪ ನಿರ್ಮಾಣ ಮಾಡಿದರು. ಅಲ್ಲಮಪ್ರಭು ಅವರನ್ನು ಅಧ್ಯಕ್ಷರನ್ನಾಗಿ ಮಾಡಿದರು. ಈಗ ಮಹಿಳಾ ಮೀಸಲಾತಿ ಬಿಲ್ ಮಂಡನೆಗೆ ಮುಂದಾಗಿದ್ದಾರೆ. ಆದರೆ ಅಂಬೇಡ್ಕರ್ ಹಿಂದೂ ಕೋಡ್ ಬಿಲ್ ತಂದು ಹೆಣ್ಣು ಮಕ್ಕಳಿಗೂ ಸಮಾನ ಹಕ್ಕು ನೀಡುವಂತೆ ಪ್ರತಿಪಾದಿಸಿದಾಗ ಸೋಲುಂಟು ಆಗುವಂತೆ ಮಾಡಿದ್ದು ಸನಾತನ ಮನಸ್ಥಿತಿಯವರು.
ಬುದ್ದ ಬಸವ ಅಂಬೇಡ್ಕರ್ ದೊಡ್ಡ ಪ್ರಜಾಪ್ರಭುತ್ವ ವಾದಿಗಳು. ಸಾಮಾಜಿಕ ತಳಹದಿಯ ಮೇಲೆ ಪ್ರಜಾಪ್ರಭುತ್ವ ನಿಂತಿದೆ. ಸಿದ್ದರಾಮಯ್ಯ ಹಾಗು ನಾನು ಬಸವಣ್ಣನವರ ಅನುಯಾಯಿಗಳು ಎಂದು ಹೇಳಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

7 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

7 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

7 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

7 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

7 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

10 hours ago