ಮೈಸೂರು ನಗರ

ಕನ್ನಡ ಭಾಷೆ ಬೆಳವಣಿಗೆಗೆ ಬಸವಣ್ಣರವರ ವಚನಗಳು ಜೀವ ತುಂಬಿವೆ: ಗಿರೀಶ್

ಮೈಸೂರು:‌ ಸಮಾಜ ಸುಧಾರಕ ಬಸವಣ್ಣ ಅವರು 12 ನೇ ಶತಮಾನದಲ್ಲಿ ಆಡು ಭಾಷೆ ಕನ್ನಡದಲ್ಲೇ ವಚನ ರಚಿಸಿ  ಕನ್ನಡ ಭಾಷ ಬೆಳವಣಿಗೆಗೆ  ಜೀವ ತುಂಬಿದ್ದರು ಎಂದು ಜೀವಧಾರ ರಕ್ತನಿಧಿ ಕೇಂದ್ರದ ಗಿರೀಶ್‌ ಅಭಿಪ್ರಾಯಪಟ್ಟರು.

ಮೈಸೂರು ದಸರಾ ವಸ್ತುಪ್ರದರ್ಶನದ ಕರ್ನಾಟಕ ಸಂಭ್ರಮ50 ಸಾಂಸ್ಕೃತಿಕ ವೇದಿಕೆಯಲ್ಲಿ ಕರ್ನಾಟಕ‌ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣಅವರ ವಚನಗಾಯನ ಹಾಗೂ ನೃತ್ಯರೂಪಕ ಕಾರ್ಯಕ್ರಮವನ್ನ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಬಸವಣ್ಣ ರವರ ಸಂಕಲ್ಪ ಮಾಡಿ ಬಿಜ್ಜಳನ ಆಸ್ಥಾನದಲ್ಲಿ ಕ್ರಾಂತಿ ಉಂಟು ಮಾಡಿದರು ಎಂದರು.

ಬಸವಣ್ಣ ಅವರು ಆಡು ಮಾತಿನಲ್ಲೇ ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನ ಸಾಹಿತ್ಯ ರಚಿಸಿ ಕನ್ನಡಭಾಷೆಯ ಬೆಳವಣಿಗೆಗೆ ಶ್ರಮಿಸಿ ವಿಶ್ವಗುರುವಾದರು. ಸಮಾಜದಲ್ಲಿ ಇರುವ ಅಂಕುಡೊಂಕು ತಾರತಮ್ಯಗಳನ್ನ ಸರಿಪಡಿಸಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದ ಅವರು 12ನೇ ಶತಮಾನದಲ್ಲೆ ಅನುಭವ ಮಂಟಪ ಸ್ಥಾಪನೆ ಮಾಡಿ ಜನಪರ ಆಡಳಿತ ನಿರ್ದೇಶಿಸಿದ್ದರು ಎಂದು ಹೇಳಿದರು.

 

ಬಿಜ್ಜಳ ರಾಜ ಆಸ್ಥಾನದಲ್ಲಿ ಬಸವಣ್ಣ ಮಂತ್ರಿಯಾಗಿ, ಕವಿಯಾಗಿ, ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾಗಿ ಕನ್ನಡ ಭಾಷಾ ಸಾಹಿತ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಗಾಗಿ ಬಸವಣ್ಣ ಒಂದು ಜಾತಿ ಹಾಗೂ ಒಂದು ಪ್ರದೇಶಕ್ಕೆ ಸೀಮಿತರಲ್ಲ ಅವರು ಇಡೀ ವಿಶ್ವಕ್ಕೆ ಗುರು ಎಂದರು.

ಇದೇ ಸಂಧರ್ಭದಲ್ಲಿ ವಿಶ್ವಗುರು ಬಸವಣ್ಣ ಪ್ರಶಸ್ತಿಗೆ ಭಾಜನರಾದ , ಮಹದೇವಪ್ರಸಾದ್, ಕಂಡೇಶ್, ಮಲ್ಲಿಗೆ ವೀರೇಶ್, ಸರ್ವಮಂಗಳ, ಪುಷ್ಪಲತಾ ರವರನ್ನ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ ವ್ಯವಸ್ಥಾಪಕರಾದ ಕೃಷ್ಣ,  ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಡಾ. ನಾಗರಾಜ ವಿ ಭೈರಿ, ನಿರೂಪಕ ಅಜಯ್ ಶಾಸ್ತ್ರಿ, ಬೆಟ್ಟೆಗೌಡ, ಗಾಯಕ ಅಮ್ಮರಾಮಚಂದ್ರ, ಮಹಲಿಂಗು, ಸಿರಿಬಾಲು, ಸದಾಶಿವ, ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

5 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago