ಮೈಸೂರು ನಗರ

ಕನ್ನಡ ಭಾಷೆ ಬೆಳವಣಿಗೆಗೆ ಬಸವಣ್ಣರವರ ವಚನಗಳು ಜೀವ ತುಂಬಿವೆ: ಗಿರೀಶ್

ಮೈಸೂರು:‌ ಸಮಾಜ ಸುಧಾರಕ ಬಸವಣ್ಣ ಅವರು 12 ನೇ ಶತಮಾನದಲ್ಲಿ ಆಡು ಭಾಷೆ ಕನ್ನಡದಲ್ಲೇ ವಚನ ರಚಿಸಿ  ಕನ್ನಡ ಭಾಷ ಬೆಳವಣಿಗೆಗೆ  ಜೀವ ತುಂಬಿದ್ದರು ಎಂದು ಜೀವಧಾರ ರಕ್ತನಿಧಿ ಕೇಂದ್ರದ ಗಿರೀಶ್‌ ಅಭಿಪ್ರಾಯಪಟ್ಟರು.

ಮೈಸೂರು ದಸರಾ ವಸ್ತುಪ್ರದರ್ಶನದ ಕರ್ನಾಟಕ ಸಂಭ್ರಮ50 ಸಾಂಸ್ಕೃತಿಕ ವೇದಿಕೆಯಲ್ಲಿ ಕರ್ನಾಟಕ‌ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣಅವರ ವಚನಗಾಯನ ಹಾಗೂ ನೃತ್ಯರೂಪಕ ಕಾರ್ಯಕ್ರಮವನ್ನ ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದ ಬದಲಾವಣೆಗಾಗಿ ಅಸಮಾನತೆ ಹೋಗಬೇಕು. ಪ್ರತಿಯೊಬ್ಬರೂ ಸ್ವಾಭಿಮಾನದಿಂದ ಬದುಕುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ಬಸವಣ್ಣ ರವರ ಸಂಕಲ್ಪ ಮಾಡಿ ಬಿಜ್ಜಳನ ಆಸ್ಥಾನದಲ್ಲಿ ಕ್ರಾಂತಿ ಉಂಟು ಮಾಡಿದರು ಎಂದರು.

ಬಸವಣ್ಣ ಅವರು ಆಡು ಮಾತಿನಲ್ಲೇ ಜನರಿಗೆ ಅರ್ಥವಾಗುವ ರೀತಿಯಲ್ಲಿ ವಚನ ಸಾಹಿತ್ಯ ರಚಿಸಿ ಕನ್ನಡಭಾಷೆಯ ಬೆಳವಣಿಗೆಗೆ ಶ್ರಮಿಸಿ ವಿಶ್ವಗುರುವಾದರು. ಸಮಾಜದಲ್ಲಿ ಇರುವ ಅಂಕುಡೊಂಕು ತಾರತಮ್ಯಗಳನ್ನ ಸರಿಪಡಿಸಿ, ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದ ಅವರು 12ನೇ ಶತಮಾನದಲ್ಲೆ ಅನುಭವ ಮಂಟಪ ಸ್ಥಾಪನೆ ಮಾಡಿ ಜನಪರ ಆಡಳಿತ ನಿರ್ದೇಶಿಸಿದ್ದರು ಎಂದು ಹೇಳಿದರು.

 

ಬಿಜ್ಜಳ ರಾಜ ಆಸ್ಥಾನದಲ್ಲಿ ಬಸವಣ್ಣ ಮಂತ್ರಿಯಾಗಿ, ಕವಿಯಾಗಿ, ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರಾಗಿ ಕನ್ನಡ ಭಾಷಾ ಸಾಹಿತ್ಯದ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಹಾಗಾಗಿ ಬಸವಣ್ಣ ಒಂದು ಜಾತಿ ಹಾಗೂ ಒಂದು ಪ್ರದೇಶಕ್ಕೆ ಸೀಮಿತರಲ್ಲ ಅವರು ಇಡೀ ವಿಶ್ವಕ್ಕೆ ಗುರು ಎಂದರು.

ಇದೇ ಸಂಧರ್ಭದಲ್ಲಿ ವಿಶ್ವಗುರು ಬಸವಣ್ಣ ಪ್ರಶಸ್ತಿಗೆ ಭಾಜನರಾದ , ಮಹದೇವಪ್ರಸಾದ್, ಕಂಡೇಶ್, ಮಲ್ಲಿಗೆ ವೀರೇಶ್, ಸರ್ವಮಂಗಳ, ಪುಷ್ಪಲತಾ ರವರನ್ನ ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ ವ್ಯವಸ್ಥಾಪಕರಾದ ಕೃಷ್ಣ,  ಕರ್ನಾಟಕ ಸುಗಮ ಸಂಗೀತ ಪರಿಷತ್ ಅಧ್ಯಕ್ಷ ಡಾ. ನಾಗರಾಜ ವಿ ಭೈರಿ, ನಿರೂಪಕ ಅಜಯ್ ಶಾಸ್ತ್ರಿ, ಬೆಟ್ಟೆಗೌಡ, ಗಾಯಕ ಅಮ್ಮರಾಮಚಂದ್ರ, ಮಹಲಿಂಗು, ಸಿರಿಬಾಲು, ಸದಾಶಿವ, ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

8 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

9 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

19 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

19 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

19 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

19 hours ago